ವಲಸೆ ಕಾರ್ಮಿಕರು 
ರಾಜ್ಯ

ಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ

ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾರ್ಮಿಕರು ಯಾವುದೇ ಮಾಹಿತಿಯನ್ನು ನೀಡದೆ, ತಮ್ಮ ಸ್ವಂತ ಸ್ಥಳ, ಊರುಗಳಿಗೆ ತೆರಳುತ್ತಿರುವುದರಿಂದ ಈ ಬಗ್ಗೆ ಪಾಲಿಕೆಗೆ ಯಾವುದೇ ಮಾಹಿತಿ ದೊರೆಯುತ್ತಿಲ್ಲ. ಅದನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರುಗಳು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಸೂಚಿಸಿದ್ದಾರೆ.

ವಲಸಿಗ ಕಾರ್ಮಿಕರಿಗೆ ನೆರವಾಗುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಎಲ್ಲಾ ನಾಗರೀಕ ಸೇವಾ ಕೇಂದ್ರಗಳಲ್ಲಿ 'ವಲಸಿಗರ ಸಹಾಯ ಕೇಂದ್ರ' ತೆರೆಯಲು ಆಯುಕ್ತರು ಆದೇಶಿಸಿದ್ದಾರೆ.
 
ಪ್ರತಿ ಸಹಾಯ ಕೇಂದ್ರದಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಯೂ ಒಳಗೊಂಡಂತೆ ಬಹುಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸಿ, ಸಹಾಯ ಕೇಂದ್ರಕ್ಕೆ ಪ್ರತ್ಯೇಕ ನಿರ್ಧಿಷ್ಟ ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಅವರು ನೋಂದಣಿ ಮಾಡಿಸಲು ಕಛೇರಿಗೆ ಬರುವ ವಲಸೆ ಕಾರ್ಮಿಕರಿಗೆ ಸಲಹೆ ಸೂಚನೆಗಳನ್ನು ನೀಡಿ, ನೆರವು ಒದಗಿಸಬೇಕು ಎಂದು ಆಯುಕ್ತರು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT