ವಲಸೆ ಕಾರ್ಮಿಕರು 
ರಾಜ್ಯ

ಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ

ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾರ್ಮಿಕರು ಯಾವುದೇ ಮಾಹಿತಿಯನ್ನು ನೀಡದೆ, ತಮ್ಮ ಸ್ವಂತ ಸ್ಥಳ, ಊರುಗಳಿಗೆ ತೆರಳುತ್ತಿರುವುದರಿಂದ ಈ ಬಗ್ಗೆ ಪಾಲಿಕೆಗೆ ಯಾವುದೇ ಮಾಹಿತಿ ದೊರೆಯುತ್ತಿಲ್ಲ. ಅದನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರುಗಳು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಸೂಚಿಸಿದ್ದಾರೆ.

ವಲಸಿಗ ಕಾರ್ಮಿಕರಿಗೆ ನೆರವಾಗುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಎಲ್ಲಾ ನಾಗರೀಕ ಸೇವಾ ಕೇಂದ್ರಗಳಲ್ಲಿ 'ವಲಸಿಗರ ಸಹಾಯ ಕೇಂದ್ರ' ತೆರೆಯಲು ಆಯುಕ್ತರು ಆದೇಶಿಸಿದ್ದಾರೆ.
 
ಪ್ರತಿ ಸಹಾಯ ಕೇಂದ್ರದಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಯೂ ಒಳಗೊಂಡಂತೆ ಬಹುಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸಿ, ಸಹಾಯ ಕೇಂದ್ರಕ್ಕೆ ಪ್ರತ್ಯೇಕ ನಿರ್ಧಿಷ್ಟ ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಅವರು ನೋಂದಣಿ ಮಾಡಿಸಲು ಕಛೇರಿಗೆ ಬರುವ ವಲಸೆ ಕಾರ್ಮಿಕರಿಗೆ ಸಲಹೆ ಸೂಚನೆಗಳನ್ನು ನೀಡಿ, ನೆರವು ಒದಗಿಸಬೇಕು ಎಂದು ಆಯುಕ್ತರು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT