ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ವಿಷ ತೆಗೆಯುವ ಪವಾಡಕ್ಕೆ ಹೆಸರಾಗಿದ್ದ ದೇಗುಲದಲ್ಲೇ ಹಾವು ಕಚ್ಚಿ ಮಗು ಸಾವು!

ಹಾವಿನ ವಿಷ ತೆಗೆದು ಹಲವರನ್ನು ಬದುಕಿಸಿದ ಪವಾಡಕ್ಕೆ ಖ್ಯಾತಿಯಾಗಿದ್ದ ನಾಗಪ್ಪ ದೇಗುಲದಲ್ಲೇ ಹಾವು ಕಚ್ಚಿ ಮಗುವೊಂದು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ತೆಳ್ಳನೂರಿನಲ್ಲಿ ನಡೆದಿದೆ.

ಚಾಮರಾಜನಗರ: ಹಾವಿನ ವಿಷ ತೆಗೆದು ಹಲವರನ್ನು ಬದುಕಿಸಿದ ಪವಾಡಕ್ಕೆ ಖ್ಯಾತಿಯಾಗಿದ್ದ ನಾಗಪ್ಪ ದೇಗುಲದಲ್ಲೇ ಹಾವು ಕಚ್ಚಿ ಮಗುವೊಂದು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ತೆಳ್ಳನೂರಿನಲ್ಲಿ ನಡೆದಿದೆ.

ತೆಳ್ಳನೂರಿನ ಸಿದ್ದ ಎಂಬವರ ಮಗ ಅಜಯ್(1.5 ವರ್ಷ) ಮೃತ ದುರ್ದೈವಿ.‌ ಗ್ರಾಮದ ನಾಗಪ್ಪ ದೇಗುಲದಲ್ಲಿ ಸಿದ್ದ ಅವರ ತಮ್ಮನ ಮದುವೆ ಇಂದು ನಡೆಯುತ್ತಿತ್ತು. ಮಗು ದೇಗುಲ ಮುಂಭಾಗದ ಧೂಪದ ಕುಳಿಯಲ್ಲಿ ಆಟವಾಡುತ್ತಿದ್ದ ವೇಳೆ ಗೋಧಿನಾಗರಹಾವೊಂದು ಕಚ್ಚಿದೆ.

ಕಚ್ಚಿದ ಸ್ವಲ್ಪ ಹೊತ್ತಿನಲ್ಲೇ ಅಸ್ವಸ್ಥಗೊಂಡ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಸಂಜೆ ವೇಳೆ ಮಗು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಳಿಕ ಕುಟುಂಬಸ್ಥರು ಧೂಪದ ಕುಳಿಯ ಕಲ್ಲನ್ನು ಸರಿಸಿದ ವೇಳೆ ಹಾವೊಂದು ಕಂಡಿದ್ದು ಮಗುವನ್ನು ಕಳೆದುಕೊಂಡ ಕೋಪದಲ್ಲಿ ಹಾವನ್ನು ಸಾಯಿಸಿ ಸುಟ್ಟು ಹಾಕಿದ್ದಾರೆ. 

ಈ ದೇಗುಲಕ್ಕೆ ಹಾವು, ಚೇಳು ಕಚ್ಚಿಸಿಕೊಂಡವರು ಬಂದು ಗುಣಮುಖರಾಗಿ ತೆರಳುತ್ತಾರೆ. ಆದರೆ ವಿಧಿಯಾಟ ಎಂಬಂತೆ ದೇಗುಲದಲ್ಲೇ ಹಾವಿನಿಂದ ಕಚ್ಚಿಸಿಕೊಂಡು ಮಗು ಮೃತಪಟ್ಟಿದೆ.

ಸಂತೇಮರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

-ಗುಳಿಪುರ ನಂದೀಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT