ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸ ಕೊರೋನಾ ಪ್ರಕರಣ: ಬೆಂಗಳೂರನ್ನೂ ಮೀರಿಸುತ್ತಿರುವ ಯಾದಗಿರಿ!

ಕಳೆದ ತಿಂಗಳು ಯಾದಗಿರಿ ಜಿಲ್ಲೆಯಲ್ಲಿ ಒಂದೇ ಒಂದು ಕೊರೋನಾ ಪ್ರಕರಣ ದಾಖಲಾಗಿರಲಿಲ್ಲ, ಮೇ 17ರ ವೇಳೆಗೆ  5 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಯಾವಾಗ ಮಹಾರಾಷ್ಟ್ರದಿಂದ ವಲಸಿಗರು ಜಿಲ್ಲೆಗೆ ಬರಲು ಆರಂಭಿಸಿದರೋ ಅಂದಿನಿಂದ ಯಾದಗಿರಿ ಚಿತ್ರಣವೇ ಬದಲಾಗಿ ಹೋಗಿದೆ.

ಕಲಬುರಗಿ: ಕಳೆದ ತಿಂಗಳು ಯಾದಗಿರಿ ಜಿಲ್ಲೆಯಲ್ಲಿ ಒಂದೇ ಒಂದು ಕೊರೋನಾ ಪ್ರಕರಣ ದಾಖಲಾಗಿರಲಿಲ್ಲ, ಮೇ 17ರ ವೇಳೆಗೆ  5 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಯಾವಾಗ ಮಹಾರಾಷ್ಟ್ರದಿಂದ ವಲಸಿಗರು ಜಿಲ್ಲೆಗೆ ಬರಲು ಆರಂಭಿಸಿದರೋ ಅಂದಿನಿಂದ ಯಾದಗಿರಿ ಚಿತ್ರಣವೇ ಬದಲಾಗಿ ಹೋಗಿದೆ.

ರಾಜ್ಯದಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿಗಿಂತ ಎರಡು ಪಟ್ಟು ಯಾದಗಿರಿಯಲ್ಲಿ ಕೊರೋನಾ ಕೇಸ್ ಗಳು ಪತ್ತೆಯಾಗುತ್ತಿವೆ.

ಬೇರೆ ಬೇರೆ ರಾಜ್ಯಗಳಿಂದ ವಲಸಿಗ ಕಾರ್ಮಿಕರು ಬರುತ್ತಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ ಎಂದು ಹೇಳಲಾಗುತ್ತಿದೆ. ಸಮುದಾಯ ಮಟ್ಟದಲ್ಲಿ ಹರಡಿದೆ ಎಂದು ಈ ಭಾಗದ ಜನ ಆತಂಕಕ್ಕೊಳಗಾಗಿದ್ದಾರೆ. 

ಮಹಾರಾಷ್ಟ್ರದಿಂದ ಬಂದವರನ್ನು ಹೊರತುಪಡಿಸಿ ಉಳಿದ ಸ್ಥಳಗಳಿಂದ ಬಂದವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳ ಪಡಿಸಲಾಗುತ್ತಿದೆ.

ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಹೆಚ್ಚಿನ ಮಂದಿಯನ್ನು ನಿಭಾಯಿಸುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಹೀಗಾಗಿ ವರದಿ ಬರುವ ಮುನ್ನವೇ ಮನೆಗೆ ಕಳುಹಿಸಲಾಗುತ್ತಿದೆ. ಇದೇ ವೇಳೆ ಹೋಮ್ ಕ್ವಾರಂಟೈನ್ ಕೂಡ ಹಳ್ಳಿಗಳಲ್ಲಿ ತುಂಬಾ ಕಷ್ಟವಾಗಿದೆ.

ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದು ಮನೆಗೆ ತೆರಳಿದ ಅನೇಕರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಆರೋಗ್ಯ ಅಧಿಕಾರಿಗಳು ಅವರನ್ನು ಪತ್ತೆ ಹಚ್ಚಿ ಮತ್ತೆ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಅವರು ಹಲವರನ್ನು ಭೇಟಿ ಮಾಡಿರುವುದು ಮತ್ತಷ್ಟು ಅಪಾಯ ಹೆಚ್ಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ,

ಸೋಮವಾರದ ವೇಳೆಗೆ, ಈ ಪ್ರದೇಶದ ಸಕಾರಾತ್ಮಕ ಪ್ರಕರಣಗಳು 1,087 ಕ್ಕೆ ಏರಿದೆ, ಇದು ರಾಜ್ಯದ ಒಟ್ಟು ಪ್ರಕರಣಗಳಲ್ಲಿ ಮೂರನೇ ಒಂದು ಭಾಗದಷ್ಟಿದೆ. ಈ ಪ್ರದೇಶದಲ್ಲಿ 700 ಕ್ಕೂ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ. ಬೆಂಗಳೂರು, ಮೈಸೂರು ಅಥವಾ ಬೆಳಗಾವಿಗೆ ಹೋಲಿಸಿದರೆ ಇಲ್ಲಿ ಡಿಸ್ಚಾರ್ಜ್ ಆಗುತ್ತಿರುವವರ ಪ್ರಮಾಣ ತೀರಾ ಕಡಿಮೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT