ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಸುದ್ದಿಗೋಷ್ಠಿ 
ರಾಜ್ಯ

ರಾಜ್ಯದಲ್ಲೇ ಪ್ರಥಮ! ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ

ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64  ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ. 

ಹುಬ್ಬಳ್ಳಿ: ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64  ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆದ ಪ್ಲಾಸ್ಮಾ ಥೆರಪಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಈ ಸಂಬಂಧ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಒದಗಿಸಿದ್ದಾರೆ.

ಈ ಹಿಂದೆ ಹುಬ್ಬಳ್ಳಿಯಲ್ಲಿ ದಾಖಲಾಗಿ ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದ ರೋಗಿ ಸಂಖ್ಯೆ 363 ಅವರ ಮನವೊಲಿಸಿ ಅವರಿಂದ ಪಾಸ್ಮಾ ಪಡೆದು ಮುಂಬೈನಿಂದ ಆಗಮಿಸಿದ್ದ 64 ವರ್ಷದ ವ್ಯಕ್ತಿಗೆ ಅಳವಡಿಸಿ ಚಿಕಿತ್ಸೆ ನೀಡಲಾಗಿದೆ.

ಪ್ಲಾಸ್ಮಾ ಥೆರಪಿ ನಡೆಸಲು ಕಿಮ್ಸ್ ಗೆ ಐಸಿಎಂಆರ್ ಅನುಮತಿ ನೀಡಿತ್ತು. ಅದರ ಅನುಸಾರ ಆಸ್ಪತ್ರೆ ಚಿಕಿತ್ಸೆ ನೀಡಲು ಎಲ್ಲಾ ತಯಾರಿ ನಡೆಸಿ ದಾನಿಗಳಿಂದ ಪ್ಲಾಸ್ಮಾ ಪಡೆಯುವುದಕ್ಕೆ ಮುಂದಾಗಿತ್ತು. ಪ್ರಾರಂಭದಲ್ಲಿ ಕೋವಿಡ್ ಸೋಂಕಿನಿಂದ ಗುಣ ಹೊಂದಿದ ರೋಗಿಗಳು ಪ್ಲಾಸ್ಮಾ  ದಾನಕ್ಕೆ ಹಿಂದೇಟು ಹಾಕಿದ್ದರು. ಆಗ ವೈದ್ಯರ ತಂಡ ಅವರ ಮನವೊಲಿಸಿ ಪ್ಲಾಸ್ಮಾ  ಪಡೆದು ಚಿಕಿತ್ಸೆ ನೀಡಿದ್ದು ಇದೀಗ ಯಶಸ್ವಿಯಾಗಿದೆ.

ಕಿಮ್ಸ್​ ಆಸ್ಪತ್ರೆಯಲ್ಲಿ ಒಟ್ಟು 49 ಜನ ಕೊವಿಡ್ ಸೋಂಕಿತರು ದಾಖಲಾಗಿದ್ದು ಇದುವರೆಗೆ 22  ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು "ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು 64 ವರ್ಷದ ಕೊರೊನ ಸೋಂಕಿತರೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿ ಗುಣಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿನಂದನೆಗಳು." ಎಂದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT