ಶಾಲಾ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ) 
ರಾಜ್ಯ

ಶಾಲೆಗಳ ಪುನಾರಂಭಕ್ಕೆ ಕಸರತ್ತು; ವರದಿ ನೀಡುವಂತೆ ಸೂಚನೆ

ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಕುರಿತು ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಕುರಿತು ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದ್ದಾರೆ.

ಶಾಲೆ ಪುನಾರಂಭ ಕುರಿತು ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಅಭಿಪ್ರಾಯ ಸಂಗ್ರಹಿಸಲು ಸೂಚನೆ ನೀಡಿದ್ದು, ಜೂನ್ 12 ರ ಒಳಗೆ ಅಭಿಪ್ರಾಯ ಸಂಗ್ರಹಿಸಿ ಇಲಾಖೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಶಾಲೆಗಳನ್ನು ಪುನಾರಂಭ ಮಾಡಬಹುದಾದ ದಿನಾಂಕದ ಬಗ್ಗೆ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ, ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಹಾಗೂ ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ ನೀಡಲಾಗಿದೆ.

ವರದಿ ಬಂದ ನಂತರ ಶಾಲಾ ಪುನಾರಂಭದ ಬಗ್ಗೆ ದಿನಾಂಕ ಸ್ಪಷ್ಟನೆ ಸಿಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. 

5.6.2020 ರಿಂದಲೇ ರಾಜ್ಯದ ಎಲ್ಲ ಸರ್ಕಾರಿ‌ ಶಾಲೆಗಳು ಅಲ್ಲಿನ ಕಚೇರಿ ಸಿಬ್ಬಂದಿ ಸಂಬಂಧಿಸಿದ ಶಾಲೆಗಳಲ್ಲಿ ಕರ್ತವ್ಯಕ್ಕೆ‌ ಹಾಜರಾಗಿ, 8.6.2020ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಿದ್ದಾರೆ. ಶೈಕ್ಷಣಿಕ ತಯಾರಿಗೆ ಜೂನ್‌ ತಿಂಗಳನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳ ಪರಿಸ್ಥಿತಿಯ ಆಧಾರದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಸರ್ಕಾರದ ಕಾಲಕಾಲಿಕ ನಿರ್ದೇಶನದಂತೆ ಕ್ರಮ ವಹಿಸಲು ಸೂಚಿಸಿದ್ದಾರೆ. 8.6.2020ರಿಂದ ಖಾಸಗಿ ಅನುದಾನರಹಿತ ಶಾಲಾ ಕಛೇರಿಗಳ ಪ್ರಾರಂಭಕ್ಕೂ ಅನುಮತಿಸಿ ಆದೇಶ ಹೊರಡಿಸಲಾಗಿದ್ದು, ಪೋಷಕರ‌ ಅಭಿಪ್ರಾಯವನ್ನು 15.06.2020ರ ಒಳಗೆ ಎಸ್‌ಎಟಿಯಲ್ಲಿ ದಾಖಲಿಸಲು ಸೂಚಿಸಲಾಗಿದೆ ಎಂದು ಸಚಿವರ ಕಚೇರಿ ತಿಳಿಸಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣ ಮತ್ತು ಆನ್‌ಲೈನ್‌ನಲ್ಲಿ ಶಾಲೆ ಆರಂಭದ ವಿರುದ್ಧ ಅಭಿಯಾನ ಆರಂಭಗೊಂಡಿದ್ದು, ಬಹುತೇಕ ಪೋಷಕರು ಪ್ರಾಥಮಿಕ ಶಾಲೆ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!