ಶಾಲಾ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ) 
ರಾಜ್ಯ

ಶಾಲೆಗಳ ಪುನಾರಂಭಕ್ಕೆ ಕಸರತ್ತು; ವರದಿ ನೀಡುವಂತೆ ಸೂಚನೆ

ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಕುರಿತು ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಕುರಿತು ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿದ್ದಾರೆ.

ಶಾಲೆ ಪುನಾರಂಭ ಕುರಿತು ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಅಭಿಪ್ರಾಯ ಸಂಗ್ರಹಿಸಲು ಸೂಚನೆ ನೀಡಿದ್ದು, ಜೂನ್ 12 ರ ಒಳಗೆ ಅಭಿಪ್ರಾಯ ಸಂಗ್ರಹಿಸಿ ಇಲಾಖೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಶಾಲೆಗಳನ್ನು ಪುನಾರಂಭ ಮಾಡಬಹುದಾದ ದಿನಾಂಕದ ಬಗ್ಗೆ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ, ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಹಾಗೂ ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ ನೀಡಲಾಗಿದೆ.

ವರದಿ ಬಂದ ನಂತರ ಶಾಲಾ ಪುನಾರಂಭದ ಬಗ್ಗೆ ದಿನಾಂಕ ಸ್ಪಷ್ಟನೆ ಸಿಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. 

5.6.2020 ರಿಂದಲೇ ರಾಜ್ಯದ ಎಲ್ಲ ಸರ್ಕಾರಿ‌ ಶಾಲೆಗಳು ಅಲ್ಲಿನ ಕಚೇರಿ ಸಿಬ್ಬಂದಿ ಸಂಬಂಧಿಸಿದ ಶಾಲೆಗಳಲ್ಲಿ ಕರ್ತವ್ಯಕ್ಕೆ‌ ಹಾಜರಾಗಿ, 8.6.2020ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಿದ್ದಾರೆ. ಶೈಕ್ಷಣಿಕ ತಯಾರಿಗೆ ಜೂನ್‌ ತಿಂಗಳನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳ ಪರಿಸ್ಥಿತಿಯ ಆಧಾರದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಸರ್ಕಾರದ ಕಾಲಕಾಲಿಕ ನಿರ್ದೇಶನದಂತೆ ಕ್ರಮ ವಹಿಸಲು ಸೂಚಿಸಿದ್ದಾರೆ. 8.6.2020ರಿಂದ ಖಾಸಗಿ ಅನುದಾನರಹಿತ ಶಾಲಾ ಕಛೇರಿಗಳ ಪ್ರಾರಂಭಕ್ಕೂ ಅನುಮತಿಸಿ ಆದೇಶ ಹೊರಡಿಸಲಾಗಿದ್ದು, ಪೋಷಕರ‌ ಅಭಿಪ್ರಾಯವನ್ನು 15.06.2020ರ ಒಳಗೆ ಎಸ್‌ಎಟಿಯಲ್ಲಿ ದಾಖಲಿಸಲು ಸೂಚಿಸಲಾಗಿದೆ ಎಂದು ಸಚಿವರ ಕಚೇರಿ ತಿಳಿಸಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣ ಮತ್ತು ಆನ್‌ಲೈನ್‌ನಲ್ಲಿ ಶಾಲೆ ಆರಂಭದ ವಿರುದ್ಧ ಅಭಿಯಾನ ಆರಂಭಗೊಂಡಿದ್ದು, ಬಹುತೇಕ ಪೋಷಕರು ಪ್ರಾಥಮಿಕ ಶಾಲೆ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT