ಹಾಸನದಲ್ಲಿ ಡಾ.ಸುಧಾಕರ್ 
ರಾಜ್ಯ

ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ: ಸುಧಾಕರ್

ಮಹಾರಾಷ್ಟ್ರದಿಂದ ವಾಪಾಸಾಗುವವರಿಗೆ ಕೊರೋನಾ ಪರೀಕ್ಷೆ ಮಾಡುವುದು ಹಾಗೂ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸುವುದು ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ,

ಹಾಸನ: ಮಹಾರಾಷ್ಟ್ರದಿಂದ ವಾಪಾಸಾಗುವವರಿಗೆ ಕೊರೋನಾ ಪರೀಕ್ಷೆ ಮಾಡುವುದು ಹಾಗೂ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸುವುದು ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ,

ಹಾಸನದಲ್ಲಿ ಕೋವಿದ್ ಸ್ಥಿತಿಗತಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬರುವವರನ್ನು ಸದ್ಯ ಸಾಂಸ್ಥಿಕ ಕ್ವಾರಂಟೈನ್ ನಲ್ಲಿಡಲಾಗುತ್ತಿದೆ, ರಾಜ್ಯದಲ್ಲಿ ಕೊರೋನಾ ಪ್ರಮಾಣ ಕಡಿಮೆಯಿತ್ತು, ಆದರೆ ಮಹಾರಾಷ್ಟ್ರದಿಂದ ವಾಪಸ್ ಬಂದವರಿಂದ ಸೋಂಕಿನ ಪ್ರಮಾಣ ಏರುತ್ತಿದೆ, ಹೀಗಾಗಿ ಅವರನ್ನು 14 ದಿನಗಳ ಕ್ವಾರಂಟೈನ್ ನಂತರ ಮನೆಗೆ ಕಳುಹಿಸುವ ಸಂಬಂಧ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಅವರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 3,04,816 ಮಂದಿಯನ್ನು ಕರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 3450 ಮಂದಿಗೆ ಮಾತ್ರ ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಂದರೆ ಇದರ ಪ್ರಮಾಣ ಶೇಕಡ 1.1ರಷ್ಟಿದ್ದು, ಇದು ದೇಶದಲ್ಲಿಯೇ ಅತ್ಯಂತ ಕಡಿಮೆಯದ್ದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಾಗ ಕೇವಲ 2 ಕೋವಿಡ್ ಪರೀಕ್ಷಾ ಕೇಂದ್ರಗಳಿದ್ದವು, ಈಗ ರಾಜ್ಯದಲ್ಲಿ 64 ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಮನೆಯಲ್ಲಿ ಕ್ವಾರಂಟೈನ್‌ ನಿಯಮ ಜಾರಿಗೆ ಬರಲಿದೆ. ಇದಕ್ಕಾಗಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತಿದೆ. ಇದು ನಗರ, ಪಟ್ಟಣ ಪ್ರದೇಶದಿಂದ ಹಳ್ಳಿವರೆಗೂ ಇರಲಿದೆ ಎಂದರು. ಎಲ್ಲವೂ ಸರಕಾರದ ಕಣ್ಗಾವಲಿನಲ್ಲಿ ನಡೆಯಲಿದೆ. ಆಸ್ಪತ್ರೆಯಿಂದ ಅಥವಾ ವಿವಿಧೆಡೆ ಕ್ವಾರಂಟೈನ್ ನಲ್ಲಿದ್ದವರು ಮನೆಯಲ್ಲೂ ಐಸೋಲೇಶನ್‌ನಲ್ಲಿ ಇರುವುದು ಕಡ್ಡಾಯ ಆಗಲಿದೆ ಎಂದು ಸಚಿವರು ತಿಳಿಸಿದರು.

ರೈಲು ಪ್ರಯಾಣಕ್ಕೆ ಅನುಮತಿ ನೀಡಿರುವ ಕಾರಣ ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ, ಜನತೆ ಆತಂಕ ಪಡಬಾರದು, ಸರ್ಕಾರ ಸದಾ ನಿಮ್ಮೊಂದಿಗಿದ್ದು , ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT