ಅವೆನ್ಯೂ ರಸ್ತೆ 
ರಾಜ್ಯ

ಜೂನ್ 8 ರಿಂದ ಕೆಆರ್ ಮಾರ್ಕೆಟ್ -ರಸೆಲ್ ಮಾರ್ಕೆಟ್ ತೆರೆಯಲು ಷರತ್ತು ಬದ್ದ ಅನುಮತಿ?

ರಸೆಲ್ ಮಾರ್ಕೆಟ್, ಕೆ ಆರ್ ಮಾರ್ಕೆಟ್, ಕಲಾಸಿ ಪಾಳ್ಯ ಮಾರುಕಟ್ಟೆಗಳ ಪ್ರತಿನಿಧಿಗಳು ಮಂಗಳವಾರ ಬಿಬಿಎಂಪಿ ಮತ್ತೆ ಮೇಯರ್ ಗೆ ಮನವಿ ಸಲ್ಲಿಸಿ ತಮಗಾಗುತ್ತಿರುವ ಆರ್ಥಿಕ ನಷ್ಟ ತಪ್ಪಿಸಲು ಮಾರುಕಟ್ಟೆ ಪುನರಾಂಭಿಸುವಂತೆ ಮನವಿ ಸಲ್ಲಿಸಿದ್ದಾರೆ

ಬೆಂಗಳೂರು: 75 ದಿನಗಳ ನಂತರ ಕೆ ಆರ್ ಮಾರ್ಕೆಟ್ ಮತ್ತು ರಸೆಲ್ ಮಾರ್ಕೆಟ್ ಗಳು ಜೂನ್ 8 ರಿಂದ ಮತ್ತೆ ಕಾರ್ಯಾರಂಭ ಮಾಡಲಿವೆ. 

ರಸೆಲ್ ಮಾರ್ಕೆಟ್, ಕೆ ಆರ್ ಮಾರ್ಕೆಟ್, ಕಲಾಸಿ ಪಾಳ್ಯ ಮಾರುಕಟ್ಟೆಗಳ ಪ್ರತಿನಿಧಿಗಳು ಮಂಗಳವಾರ ಬಿಬಿಎಂಪಿ ಮತ್ತು ಮೇಯರ್ ಗೆ ಮನವಿ ಸಲ್ಲಿಸಿ ತಮಗಾಗುತ್ತಿರುವ ಆರ್ಥಿಕ ನಷ್ಟ ತಪ್ಪಿಸಲು ಮಾರುಕಟ್ಟೆ ಪುನರಾಂಭಿಸುವಂತೆ ಮನವಿ ಸಲ್ಲಿಸಿದ್ದಾರೆ.

ಸಂಸದ ಪಿಸಿ ಮೋಹನ್ ಜೊತೆ ಶಿವಾಜಿನಗರ ಮತ್ತು ಭಾರತಿ ನಗರ ಕಾರ್ಪೋರೇಟರ್ ಗಳು ಮನವಿ ಸಲ್ಲಿಸಿದ್ದು, ಲಾಕ್ ಡೌನ್ ತೆರವಾಗಿರುವ ಕಾರಣ ಮಾರುಕಟ್ಟೆ ತೆರೆಯಲು ಅನುಮತಿ ನೀಡಬೇಕೆಂದು ಹೇಳಿದ್ದಾರೆ.

ನಾವು ಮಾರುಕಟ್ಟೆ ತೆರೆಯಲು ಅನುಮತಿ ನೀಡಿದ್ದೇವೆ. ಅದರ ಜೊತೆಗೆ ಕೆಲವು ಷರತ್ತುಗಳನ್ನು ನೀಡಿದ್ದೇವೆ, ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಬೀದಿ ವ್ಯಾಪಾರಿಗಳಿಗೆ ಅನುಮತಿ ನೀಡಿಲ್ಲ, ವ್ಯಾಪಾರಿಗಳು ಸ್ವಚ್ಛತೆ ಮತ್ತು ಹೈಜಿನಿಕ್ ಬಗ್ಗೆ ಗಮನ ಹರಿಸಬೇಕು. ಜೊತೆಗೆ ಕಸದ ವರ್ಗಿಕರಣ ಮತ್ತು ವೈಜ್ಞಾನಿಕ ರೀತಿಯ ವಿಲೇವಾರಿ ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೂಚಿಸಿದ್ದಾರೆ.

ಒಂದೆ ಒಂದು ಸಣ್ಣ ನಿಯಮ ಉಲ್ಲಂಘನೆಯಾದರೂ ಮತ್ತೆ ಮಾರ್ಕೆಟ್ ಮುಚ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ. ಆದರೆ ಮಾರ್ಕೆಟ್ ತೆರೆಯುವ ಬಗ್ಗೆ ಲಿಖಿತ ಆದೇಶ ಇನ್ನೂ ಹೊರ ಬಿದ್ದಿಲ್ಲ. ಕೆಆರ್ ಮಾರ್ಕೆಟ್ ಮತ್ತು ರಸೆಲ್ ಮಾರ್ಕೆಟ್ ತೆರೆಯಲು ಷರತ್ತುಬದ್ಧ ಅನುಮತಿ ನೀಡಲಾಗಿದೆ, ಆದರೆ ಕಲಾಸಿ ಪಾಳ್ಯ ಮಾರುಕಟ್ಟೆ ತೆರೆಯುವ ಬಗ್ಗೆ ಇನ್ನೂ ನಿರ್ದಾರವಾಗಿಲ್ಲ.

ಮಾರುಕಟ್ಟೆ ಪುನಾರಂಭವಾದ ನಂತರ ನಿಯಮ ಪಾಲನೆಯಾಗುತ್ತಿದೆಯೇ ಎಂಬ ಬಗ್ಗ ಪ್ರತಿನಿತ್ಯ ಪರಿಶೀಲನೆ ನಡೆಸಲಾಗುತ್ತದೆ, ನಿಯಮ ಉಲ್ಲಂಘನೆಯಾದರೇ ಕೂಡಲೇ ಮಾರ್ಕೆಟ್ ಬಂದ್ ಮಾಡಲಾಗುವುದು ಎಂದು ಮೇಯರ್ ಗೌತಮ್ ಕುಮಾರ್ ಜೈನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

ಹಿಂದೂ ಮಹಿಳೆ ಪರ ಸಹಾಯ ಕೋರಿದ ಮುಸ್ಲಿಂ ಮಹಿಳೆಯರು: ಇದು ನಮ್ಮ ಭಾರತ, ಇದನ್ನು ಉಡುಪಿಯ ಬಿಜೆಪಿಯವರು ನೋಡಿ ಕಲೀಬೇಕು ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-Video

SCROLL FOR NEXT