ಸಾಂದರ್ಭಿಕ ಚಿತ್ರ 
ರಾಜ್ಯ

ಪಾಸ್ ಇದ್ದರೆ ಮಂಗಳೂರು-ಕಾಸರಗೋಡು ನಡುವೆ ಸಂಚರಿಸಲು ಅವಕಾಶ

ಎರಡೂವರೆ ತಿಂಗಳ ಬಳಿಕ ಮಂಗಳೂರು-ಕಾಸರಗೋಡು ನಡುವಿನ ಜನರ ಸಂಚಾರಕ್ಕೆ ಉಭಯ ಜಿಲ್ಲಾಡಳಿತಗಳು ಅನುಮತಿ ನೀಡಿವೆ.

ಮಂಗಳೂರು: ಎರಡೂವರೆ ತಿಂಗಳ ಬಳಿಕ ಮಂಗಳೂರು-ಕಾಸರಗೋಡು ನಡುವಿನ ಜನರ ಸಂಚಾರಕ್ಕೆ ಉಭಯ ಜಿಲ್ಲಾಡಳಿತಗಳು ಅನುಮತಿ ನೀಡಿವೆ.

ಕೊರೋನಾ ವೈರಸ್ ಭೀತಿಯಿಂದ ಬಂದ್ ಆಗಿದ್ದ ಮಂಗಳೂರು – ಕಾಸರಗೋಡು ಗಡಿಯಲ್ಲಿ ಪಾಸ್ ಇದ್ದವರಿಗೆ ಸಂಚರಿಸಲು ಅವಕಾಶ ದೊರತಿದೆ. ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರು ತಮ್ಮ ಸಂಸ್ಥೆಯ ಅಧಿಕೃತ ಪಾಸ್ ಬಳಸಿ ಸಂಚರಿಸಲು ಅವಕಾಶ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ.

ಕಾಸರಗೋಡಿನಲ್ಲಿರುವವರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಸಂಚರಿಸುತ್ತಾರೆ. ಇಂತವರಿಗೆ ಪಾಸ್ ಬಳಸಿ ನಿತ್ಯ ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಲಾಗಿದೆ.

Dkdpermit ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚಿಸಲಾಗಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರಿಗಷ್ಟೇ ಅವಕಾಶ ನೀಡಲಾಗಿದೆ. ಉದ್ಯೋಗ ಹೊರತು ಅನ್ಯ ಕಾರ್ಯಕ್ಕೆ ಪಾಸ್ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪಾಸ್ ಗೆ ಅರ್ಜಿ ಸಲ್ಲಿಸಲು ಆಧಾರ್, ಉದ್ಯೋಗ ವಿಳಾಸ, ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಪ್ರಯಾಣಿಕರು ನಿತ್ಯ ಥರ್ಮಲ್ ಸ್ಕ್ಯಾನ್ ಮತ್ತು ಆರೋಗ್ಯ ತಪಾಸಣೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT