ಸಂಗ್ರಹ ಚಿತ್ರ 
ರಾಜ್ಯ

ಬಂಡೀಪುರ: 3 ಹೋಮ್ ಸ್ಟೇಗಳಿಗೆ ನೀಡಲಾಗಿದ್ದ ನೊಂದಣಿ ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಒಳಪಟ್ಟ ಜಮೀನುಗಳಲ್ಲಿ 3 ಹೋಮ್ ಸ್ಟೇ ಗಳಿಗೆ ಪ್ರವಾಸೋದ್ಯಮ ಇಲಾಖೆವತಿಯಿಂದ ನೀಡಲಾಗಿರುವ ನೊಂದಣಿ ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ. 

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಒಳಪಟ್ಟ ಜಮೀನುಗಳಲ್ಲಿ 3 ಹೋಮ್ ಸ್ಟೇ ಗಳಿಗೆ ಪ್ರವಾಸೋದ್ಯಮ ಇಲಾಖೆವತಿಯಿಂದ ನೀಡಲಾಗಿರುವ ನೊಂದಣಿ ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ. ಈ ಪೈಕಿ 2 ಹೋಮ್ ಸ್ಟೇ ಕಟ್ಟಡಗಳನ್ನು 10 ದಿನದೊಳಗೆ ತೆರವುಗೊಳಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಕಣಿಯನಪುರ ಗ್ರಾಮದ ಸರ್ವೇ ನಂ. 56ರ 5 ಎಕರೆ ಜಮೀನಿನ ಪೈಕಿ 2 ಎಕರೆ ಜಮೀನನ್ನು ವಾಸದ ಮನೆ ಮತ್ತು ಫಾರಂ ಹೌಸ್ ಉದ್ದೇಶಕ್ಕೆ ಅನ್ಯಕ್ರಾಂತವಾಗಿತ್ತು. ಸದರಿ ಜಮೀನಿನಲ್ಲಿ ನಿರ್ಮಿಸಿರುವ ಕಟ್ಟಡಗಳಲ್ಲಿ ಹೋಮ್ ಸ್ಟೇ ನಡೆಸಲು ಕಾರ್ತಿಕ್‍ದವೆ ಅವರಿಗೆ, ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಮಂಗಲ ಗ್ರಾಮದ ಸರ್ವೇ ನಂ. 146ರ 4.35 ಎಕರೆ ಜಮೀನಿನಲ್ಲಿ ನಿರ್ಮಿಸಿರುವ ಕಟ್ಟಡಗಳಲ್ಲಿ ಹೋಮ್ ಸ್ಟೇ ನಡೆಸಲು ಎನ್.ಕೆ ಕಾರ್ತಿಕ್ ಅವರಿಗೆ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಮಂಗಲ ಗ್ರಾಮದ ಸರ್ವೇ ನಂ. 517ರ 8.3 ಎಕರೆ ಜಮೀನಿನಲ್ಲಿ ನಿರ್ಮಿಸಿರುವ ಕಟ್ಟಡಗಳಲ್ಲಿ ಹೋಮ್ ಸ್ಟೇ ನಡೆಸಲು ವಿ. ಸೋಮಶೇಖರ್ ಅವರಿಗೆ ನೊಂದಣಿ ಪ್ರಮಾಣ ಪತ್ರ ನೀಡಲಾಗಿತ್ತು. 

ಕೇಂದ್ರಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಸೂಚನೆಯನ್ನು ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸದರಿ ಮೂರು ಹೋಮ್ ಸ್ಟೇ ಗಳಿಗೆ ನೀಡಲಾಗಿರುವ ನೊಂದಣಿ ರದ್ದುಪಡಿಸಿ ಆದೇಶಿಸಲಾಗಿದೆ. ಎನ್.ಕೆ. ಕಾರ್ತಿಕ್, ವಿ. ಸೋಮಶೇಖರ್ ಅವರು ನೊಂದಣಿ ಪ್ರಮಾಣಪತ್ರ ಹೊಂದಿದ್ದ ಹೋಮ್ ಸ್ಟೇ ಕಟ್ಟಡವನ್ನು 10 ದಿನದೊಳಗೆ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಹಶಿಲ್ದಾರರಿಗೆ ಸೂಚಿಸಿದ್ದಾರೆ.

ವರದಿ: ಗುಳಿಪುರ ನಂದೀಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT