ಹೈಕೋರ್ಟ್ 
ರಾಜ್ಯ

ಪಾದರಾಯನಪುರ ಗಲಾಟೆ ಪ್ರಕರಣ: ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಪಾದರಾಯನಪುರದಲ್ಲಿ ಕೊರೋನಾ ನಿಯಂತ್ರಣ ಕರ್ತವ್ಯದಲ್ಲಿದ್ದ ವೈದ್ಯರು, ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣ 126 ಆರೋಪಿಗಳ ವಿರುದ್ಧ ಜೆ.ಜೆ.ನಗರ ಠಾಣಾ ಪೊಲೀಸರು ದಾಖಲಿಸಿರುವ ಪ್ರತ್ಯೇಕ ನಾಲ್ಕು ಎಫ್ಐಆರ್ ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 

ಬೆಂಗಳೂರು: ಪಾದರಾಯನಪುರದಲ್ಲಿ ಕೊರೋನಾ ನಿಯಂತ್ರಣ ಕರ್ತವ್ಯದಲ್ಲಿದ್ದ ವೈದ್ಯರು, ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣ 126 ಆರೋಪಿಗಳ ವಿರುದ್ಧ ಜೆ.ಜೆ.ನಗರ ಠಾಣಾ ಪೊಲೀಸರು ದಾಖಲಿಸಿರುವ ಪ್ರತ್ಯೇಕ ನಾಲ್ಕು ಎಫ್ಐಆರ್ ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 

ವಜೀರ್ ಖಾನ್ ಸೇರಿದಂತೆ ಪ್ರಕಱಣದ 126 ಆರೋಪಿಗಳು ತಮ್ಮ ವಿರುದ್ಧ ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ನಾಲ್ಕು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಈ ಆದೇಶ ನೀಡಿದ್ದಾರೆ. 

ಒಂದೇ ಕೃತ್ಯ ಸಂಬಂಧ 2ನೇ ಎಫ್ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ, ಈ ಪ್ರಕರಣದಲ್ಲಿ ಪೊಲೀಸರು ತಮ್ಮ ವಿರುದ್ಧ ಒಂದೇ ಕೃತ್ಯಕ್ಕೆ ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. ಹೀಗಾಗಿ ಎಫ್ಐಆರ್ ಗಳನ್ನು ರದ್ದುಪಡಿಸಬೇಕು ಹಾಗೂ ಆ ಕುರಿತ ಕಾನೂನು ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರು ಕೋರಿದ್ದರು. 

ಈ ವಾದವನ್ನು ಆಕ್ಷೇಪಿಸಿದ ರಾಜ್ಯ ಸರ್ಕಾರಿ ಅಭಿಯೋಜಕರಾದ ವಿ.ಎಂ.ಶೀಲವಂತ್ ಅವರು, ಅರ್ಜಿದಾರರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.ನಾಲ್ಕು ಸ್ಥಳ, ಬೇರೆ ಬೇರೆ ಸಮಯದಲ್ಲಿ ಸಂಭವಿಸಿದ ಘಟನೆಗಳ ಕುರಿತು ನಾಲ್ವರು ದಾಖಲಿಸಿದ ಪ್ರತ್ಯೇಕ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ ಒಂದೇ ಕೃತ್ಯಕ್ಕೆ 2 ಎಫ್ಐಆರ್ ದಾಖಲಿಸಿಲ್ಲ ಎಂದು ವಾದಿಸಿದರು. 

ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಎಫ್ಐಆರ್ ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿ ವಿಚಾರಣೆ ಮುಂದೂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT