ಕಾರ್ಪೋರೇಟರ್ ಇಮ್ರಾನ್ ಪಾಷಾ 
ರಾಜ್ಯ

ಪಾದರಾಯನಪುರ ಪುಂಡರ ಜಾಮೀನಿಗೆ ಕಾರ್ಪೋರೇಟರ್ ಶೂರಿಟಿ!

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ 126 ಮಂದಿ ಆರೋಪಿಗಳ ಜಾಮೀನಿಗೆ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರೇ ಶ್ಯೂರಿಟಿ ನೀಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.

ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ 126 ಮಂದಿ ಆರೋಪಿಗಳ ಜಾಮೀನಿಗೆ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರೇ ಶ್ಯೂರಿಟಿ ನೀಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಆರೋಪಿಗಳ ಪೈಕಿ ತಾವು 120 ಮಂದಿಗೆ ಜಾಮೀನು ನೀಡಿರುವುದಾಗಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಮಾಧ್ಯಮದೊಂದಿಗೆ ಫೋನ್ ಮೂಲಕ ಮಾತನಾಡಿದ ಇಮ್ರಾನ್ ಪಾಷಾ ಅವರು, ಬಂಧಿತ 126 ಮಂದಿಯ ಪೈಕಿ 120 ಮಂದಿ ಅಮಾಯಕರು. ಅವರನ್ನು ಪೊಲೀಸರು ಸುಖಾಸುಮ್ಮನೆ ಬಂಧಿಸಿದ್ದಾರೆ. ಅಂದು ನಡೆದ ಗಲಾಟೆಯಲ್ಲಿ ಅವರು ಗಲಾಟೆಯಲ್ಲಿ ಪಾಲ್ಗೊಂಡಿರಲಿಲ್ಲ. ಬದಲಿಗೆ ಅಲ್ಲಿ ನಿಂತು ನೋಡುತ್ತಿದ್ದರು. ಇದನ್ನೇ ಸಾಕ್ಷಿಯಾಗಿ ಸ್ವೀಕರಿಸಿದ ಪೊಲೀಸರು ಅವರನ್ನೂ ಕೂಡ ಬಂಧಿಸಿದ್ದರು. ಇವರೆಲ್ಲರೂ ಅಮಾಯಕರು ಮತ್ತು ಬಡವರು ಎಂದು ಇಮ್ರಾನ್ ಪಾಷಾ ಹೇಳಿದ್ದಾರೆ.

ಅಲ್ಲದೆ ಬಂಧಿತರ ಕುಟುಂಬಸ್ಥರು ನಿತ್ಯವೂ ತಮ್ಮ ಮನೆ ಬಳಿ ಬಂದು ತಮ್ಮವರು ಅಮಾಯಕರು. ಸುಖಾಸುಮ್ಮನೆ ಪೊಲೀಸರು ಎಳೆದುಕೊಂಡು ಹೋಗಿದ್ದಾರೆ ಎಂದು ಅಳಲು ತೋಡಿಕೊಂಡಿದ್ದರು. ಆಲ್ಲದೆ ಈ ಕುರಿತು ನಾನು ಕೂಡ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಅಮಾಯಕರನ್ನು ಬಿಟ್ಟುಬಿಡುವಂತೆ ಮನವಿ ಮಾಡಿದ್ದೆ. ಇದೀಗ ಅವರಿಗೆ ಜಾಮೀನು ದೊರೆತಿದೆ ಎಂದು ಹೇಳಿದ್ದಾರೆ. 

ಕಳೆದ ಮೇ 30 ರಂದು ಕರ್ನಾಟಕ ಹೈಕೋರ್ಟ್ ಪ್ರಕರಣದ ಎಲ್ಲ 126 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಅಲ್ಲದೆ ತಲಾ 1 ಲಕ್ಷ ರೂ ಭದ್ರತಾ ಠೇವಣಿ (ಶ್ಯೂರಿಟಿ) ಇಡುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT