ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕವೇ ಫಿಕ್ಸ್ ಆಗಿಲ್ಲ, ಹೊಸ ಕಾರು ಖರೀದಿಗೆ ಮುಂದಾದ ಆಯೋಗ!

ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಇನ್ನೂ ಸರಿಯಾದ ಮಾಹಿತಿಯಿಲ್ಲ, ಹೀಗಿರುವಾಗಲೇ  ಚುನಾವಣಾ ಆಯೋಗದ ಬಳಕೆಗಾಗಿ  ಹೈಎಂಡ್ ಮಲ್ಟಿ- ಯುಟಿಲಿಟಿ ವಾಹನ ಖರೀದಿಗೆ ಮುಂದಾಗಿದೆ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಇನ್ನೂ ಸರಿಯಾದ ಮಾಹಿತಿಯಿಲ್ಲ, ಹೀಗಿರುವಾಗಲೇ  ಚುನಾವಣಾ ಆಯೋಗದ ಬಳಕೆಗಾಗಿ  ಹೈಎಂಡ್ ಮಲ್ಟಿ- ಯುಟಿಲಿಟಿ ವಾಹನ ಖರೀದಿಗೆ ಮುಂದಾಗಿದೆ.ಕೊರೋನಾದಿಂದಾಗಿ ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ತಲೆದೋರಿದ್ದು,ಇಂತಹ ಪರಿಸ್ಥಿತಿಯಲ್ಲಿ ಹೊಸ ಕಾರು
ಖರೀದಿಗೆ ಮುಂದಾಗಿರುವುದು ಚರ್ಚೆಗೆ ಕಾರಣವಾಗಿದೆ.

ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ   5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲಿ ಮುಗಿಯಲಿದೆ. ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು, ಆದರೆ ಕೊರೋನಾ ಹಿನ್ನೆಲೆಯಲ್ಲಿ ವಿನಾಯಿತಿ ನೀಡಲು ಬರುತ್ತದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ಇನ್ನೂ ದಿನಾಂಕ ನಿಗದಿ ಮಾಡಿಲ್ಲ.

ಕಳೆದ ವರ್ಷದ ಜುಲೈ ನಲ್ಲಿ ಟಾಟಾ ಇಂಡಿಗೋ ಕಾರು ಹರಾಜು ಹಾಕಿದ್ದ ಚುನಾವಣಾ ಆಯೋಗ ಟಯೋಟಾ ಇನ್ನೋವಾ ಕ್ರಿಸ್ಟಾ ಕಾರಿಗಾಗಿ ಸರ್ಕಾರಕ್ಕೆ ಮನವಿ ಮಾಡಿತ್ತು.   ಹೀಗಾಗಿ 2020 ಮತ್ತು 2021 ರ  ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗಾಗಿ ಚುನಾವಣಾ ಆಯೋಗ ರಾಜ್ಯಾದ್ಯಂತ ಸಂಚರಿಸುವ ಅವಶ್ಯಕತೆಯಿದೆ.

ರಾಜ್ಯ ಚುನಾವಣಾ ಆಯೋಗವು 78 ಲಕ್ಷ ರೂ.ಗಳ ಅನುದಾನವನ್ನು ಹೊಂದಿದ್ದು, 2019 ರ ನವೆಂಬರ್‌ನಲ್ಲಿ ಲಭ್ಯವಿರುವ ನಿಧಿಯಿಂದ 14 ಲಕ್ಷ ರೂ.ಗಳ ವೆಚ್ಚದಲ್ಲಿ ಟೊಯೋಟಾ ಕೊರೊಲಾ ಕಾರು ಖರೀದಿಸಲು ಹಣಕಾಸು ಇಲಾಖೆ ಅನುಮೋದನೆ ನೀಡಿದೆ.

ರಾಜ್ಯ ಚುನಾವಣಾ ಆಯುಕ್ತರ ಹುದ್ದೆಯು ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಸಮನಾಗಿರುತ್ತದೆ, ಹೀಗಾಗಿ ಸೌಲಭ್ಯಗಳನ್ನು ಸಮನಾಗಿ ಒದಗಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೇಳಿತ್ತು. ಜತೆಗೆ ಟೊಯೋಟಾ ಇನ್ನೋವಾ ಕ್ರಿಸ್ಟಾ ಕಾರು ಖರೀದಿಸಬೇಕೆಂದು ತಿಳಿಸಿತ್ತು.

ಜೂನ್ 1 2020 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 22 ಲಕ್ಷಕ್ಕೂ ಅಧಿಕ ಮೌಲ್ಯದ ವಾಹನ ಖರೀದಿಗೆ ಅನುಮೋದನೆ ನೀಡಿದೆ. ನಾವು ಹಲವು ವರ್ಷಗಳಿಂದ ಹಳೇಯ ಕಾರು ಉಪಯೋಗಿಸುತ್ತಿದ್ದೆವು, ರಾಜ್ಯದ್ಯಂತ ಸಂಚಾರ ಮಾಡುವ ಅಗತ್ಯವಿರುವ ಕಾರಣ ನಮಗೆ ಹೊಸ ಕಾರಿನ ಅವಶ್ಯಕತೆಯಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಿ. ಬಸವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT