ರಾಜ್ಯ

ಚಿಕ್ಕೋಡಿ: ತಂದೆ, ಮಗನನ್ನು ಥಳಿಸಿ ಬಾವಿಗೆಸೆದ ಕಳ್ಳರು; ತಂದೆ ಸಾವು, ಮಗ ಗಂಭೀರ ಗಾಯ

Nagaraja AB

ಚಿಕ್ಕೋಡಿ: ಆರು ಜನ ಕಳ್ಳರು ಮನೆಯ ಮಾಲೀಕ ಹಾಗೂ ಆತನ ಮಗನನ್ನು ಹಿಗ್ಗಾಮುಗ್ಗಾ ಥಳಿಸಿ ಬಾವಿಗೆಸೆದ ಪರಿಣಾಮ ತಂದೆ ಸಾವನಪ್ಪಿದ್ದು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಬಾಗ ತಾಲೂಕಿನ ಬೆಂಡವಾಡದಲ್ಲಿ ನಡೆದಿದೆ. 

ಮೃತನನ್ನು ಬೆಂಡವಾಡ ಗ್ರಾಮದ ನಿವಾಸಿ ಮುಕುಂದ ಮೇತ್ರಿ(38) ಎಂದು ಗುರುತಿಸಲಾಗಿದೆ. ಇನ್ನೂ ಆತನ ಮಗ ರಾಘವೇಂದ್ರ ಮೇತ್ರಿ (23) ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಗೋಕಾಕ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿಸಿದ್ದಾರೆ.

ಬೆಂಡವಾಡ ಗ್ರಾಮದ ತೋಟದ ಮನೆಗೆ ತಡರಾತ್ರಿ ಆರು ಜನರು ಕಳ್ಳರು ಕಳ್ಳತನಕ್ಕೆ ಯತ್ನಿಸಿದಾಗ ಮನೆಯ ಮಾಲೀಕ ಹಾಗೂ ಆತನ ಮಗ ಕಳ್ಳರನ್ನು ಹಿಡಿಯಲು ಬೆನ್ನತ್ತಿದ್ದಾರೆ. ಈ ಸಂದರ್ಭದಲ್ಲಿ  ಕಳ್ಳರು ತಂದೆ, ಮಗನನ್ನು ಥಳಿಸಿ ಅಲ್ಲಿಯೇ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಎಸೆದು ಓಡಿ ಹೋಗಿದ್ದರೆ. ಇನ್ನೂ ಹಲ್ಲೆಯಿಂದ ತಂದೆ ಸಾವನ್ನಪ್ಪಿದ್ದು ಮಗನನ್ನು ಗೋಕಾಕ ದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ‌ನೀಡಿ ಪರಿಶೀಲಿನೆ ನಡೆಸಿ ಕಳ್ಳರನ್ನು ಹಿಡಿಯಲು ಜಾಲ ಬೀಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT