ಸಂಗ್ರಹ ಚಿತ್ರ 
ರಾಜ್ಯ

ಕೂಡಿ ಬದುಕಿದರೆ ಸ್ವರ್ಗ, ಕೆಡವಿ ಬದುಕಿದರೆ ನರಕ: ಎಚ್.ಡಿ.ಡಿ, ಸಿದ್ದರಾಮಯ್ಯ ಟ್ವೀಟ್

ವಿಶ್ವಪರಿಸರ ದಿನಕ್ಕೆ ನಾಡಿನ ಗಣ್ಯರು ಶುಭ ಕೋರಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪರಿಸರ ಎಂದರೆ‌ ಮನುಷ್ಯನೊಬ್ಬನೇ ಅಲ್ಲ, ಮಣ್ಣು, ಗಾಳಿ, ಮರ, ನದಿ, ಗುಡ್ಡ, ಪ್ರಾಣಿ, ಪಕ್ಷಿ ಹುಳು-ಹುಪ್ಪಟೆಯಾದಿಯಾಗಿ ಸಕಲ ಜೀವಾತ್ಮಗಳು ಸೇರಿಕೊಂಡಿರುವ ಕೂಡು ಕುಟುಂಬ ಎಂದಿದ್ದಾರೆ.

ಬೆಂಗಳೂರು: ವಿಶ್ವಪರಿಸರ ದಿನಕ್ಕೆ ನಾಡಿನ ಗಣ್ಯರು ಶುಭ ಕೋರಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪರಿಸರ ಎಂದರೆ‌ ಮನುಷ್ಯನೊಬ್ಬನೇ ಅಲ್ಲ, ಮಣ್ಣು, ಗಾಳಿ, ಮರ, ನದಿ, ಗುಡ್ಡ, ಪ್ರಾಣಿ, ಪಕ್ಷಿ ಹುಳು-ಹುಪ್ಪಟೆಯಾದಿಯಾಗಿ ಸಕಲ ಜೀವಾತ್ಮಗಳು ಸೇರಿಕೊಂಡಿರುವ ಕೂಡು ಕುಟುಂಬ ಎಂದಿದ್ದಾರೆ.

ಕೂಡಿ ಬದುಕಿದರೆ ಸ್ವರ್ಗ, ಕೆಡವಿ ಬದುಕಿದರೆ ನರಕ ಎಂದು ಟ್ವೀಟ್ ಮೂಲಕ ಪರಿಸರ ಸಂದೇಶ ಸಾರಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಮಸ್ತರಿಗೂ ವಿಶ್ವ ಪರಿಸರ ದಿನಾಚರಣೆಯ ಶುಭಾಶಯ ಕೋರಿದ್ದು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವುದು ನಮ್ಮ‌ ಕರ್ತವ್ಯವಾಗಿದೆ. ನಮ್ಮ ಮುಂದಿನ ಪೀಳಿಗೆಯವರಿಗೂ ಉತ್ತಮ ಪರಿಸರವನ್ನು ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಪರಿಸರವನ್ನು ಮಗುವಿನಂತೆ ರಕ್ಷಿಸಿ ಉಳಿಸಿ ಬೆಳೆಸಿ ತಾಯಿಯಂತೆ ಪೂಜಿಸುವುದು ನಮ್ಮ ಕರ್ತವ್ಯವಾಗಿದೆ. ಪರಿಸರ ಕಾಳಜಿಯ ಪ್ರಜ್ಞೆಯು ಪ್ರತಿಯೊಬ್ಬರಲ್ಲಿ ಜಾಗೃತವಾಗಬೇಕು ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT