ಜೆಜೆ ನಗರ ಪೊಲೀಸ್ ಠಾಣೆ 
ರಾಜ್ಯ

ಬೆಂಗಳೂರು: ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊರೋನಾ, ಜೆಜೆ ನಗರ ಠಾಣೆಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ

ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊವೀಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಗಜೀವನ್ ಭೀಮಾ ನಗರ ಪೊಲೀಸ್ ಠಾಣೆಯನ್ನು ಶನಿವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಮೂಲಕ  ಸ್ವಚ್ಛಗೊಳಿಸಲಾಯಿತು.

ಬೆಂಗಳೂರು: ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊವೀಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಗಜೀವನ್ ಭೀಮಾ ನಗರ ಪೊಲೀಸ್ ಠಾಣೆಯನ್ನು ಶನಿವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಮೂಲಕ  ಸ್ವಚ್ಛಗೊಳಿಸಲಾಯಿತು.

ಮುಂಜಾಗ್ರತಾ ಕ್ರಮಗಳನ್ನು ಸೋಂಕು ನಿವಾರಕವನ್ನು ಬಳಸಿ ಇಡೀ ಕಟ್ಟಡವನ್ನು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ಠಾಣೆಯ ಹೊರಗಿನ ಆವರಣದಲ್ಲಿ ಸಿಬ್ಬಂದಿ ಕೆಲಸ ಮಾಡುವಂತಾಯಿತು. 

ಲೈಂಗಿಕ ಕಿರುಕುಳ ಆರೋಪದಲ್ಲಿ ಲಾಕ್ ಅಪ್ ನಲ್ಲಿ ಇರಿಸಲಾಗಿದ್ದ ವ್ಯಕ್ತಿಗೆ ಸೋಂಕು ತಗುಲಿದ್ದು, ಸಂತ್ರಸ್ತೆ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ. ಠಾಣೆಯ 20 ಅಧಿಕಾರಿಗಳು ಕೂಡಾ ಕ್ವಾರಂಟೈನ್ ನಲ್ಲಿದ್ದಾರೆ  ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಈ ಮಧ್ಯೆ, ಮೆಯೋ ಹಾಲ್ ಮತ್ತು ಇಡೀ ಆವರಣವನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಲಾಗಿದೆ. 10ನೇ ಹೆಚ್ಚುವರಿ ಮುಖ್ಯ ನಗರ ಮ್ಯಾಜಿಸ್ಟ್ರೇಟ್ ಮುಂದೆ ಜೂನ್ 1ರಂದು ಹಾಜರುಪಡಿಸಲಾಗಿದ್ದ ಆರೋಪಿಗೂ ಕೋವಿಡ್-19 ಸೋಂಕು ತಗುಲಿದೆ. 

ದೈಹಿಕ ವಿಚಾರಣೆ ಸೇರಿದಂತೆ ನ್ಯಾಯಾಲಯ ಶುಲ್ಕ, ಪ್ರಕ್ರಿಯೆ ಶುಲ್ಕ ಇತ್ಯಾದಿಗಳನ್ನು ಭೌತಿಕವಾಗಿ ಸಲ್ಲಿಸಲು ಬಾರ್ ಸದಸ್ಯರಿಗೆ ನೀಡಲಾದ ಎಲ್ಲಾ ಅಪಾಯಿಂಟ್ ಮೆಂಟ್  ರದ್ದುಪಡಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಶುಕ್ರವಾರ ನೋಟಿಸ್ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT