ಜೆಜೆ ನಗರ ಪೊಲೀಸ್ ಠಾಣೆ 
ರಾಜ್ಯ

ಬೆಂಗಳೂರು: ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊರೋನಾ, ಜೆಜೆ ನಗರ ಠಾಣೆಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ

ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊವೀಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಗಜೀವನ್ ಭೀಮಾ ನಗರ ಪೊಲೀಸ್ ಠಾಣೆಯನ್ನು ಶನಿವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಮೂಲಕ  ಸ್ವಚ್ಛಗೊಳಿಸಲಾಯಿತು.

ಬೆಂಗಳೂರು: ಲಾಕ್ ಅಪ್ ನಲ್ಲಿದ್ದ ಆರೋಪಿಗೆ ಕೊವೀಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಗಜೀವನ್ ಭೀಮಾ ನಗರ ಪೊಲೀಸ್ ಠಾಣೆಯನ್ನು ಶನಿವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ಮೂಲಕ  ಸ್ವಚ್ಛಗೊಳಿಸಲಾಯಿತು.

ಮುಂಜಾಗ್ರತಾ ಕ್ರಮಗಳನ್ನು ಸೋಂಕು ನಿವಾರಕವನ್ನು ಬಳಸಿ ಇಡೀ ಕಟ್ಟಡವನ್ನು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ಠಾಣೆಯ ಹೊರಗಿನ ಆವರಣದಲ್ಲಿ ಸಿಬ್ಬಂದಿ ಕೆಲಸ ಮಾಡುವಂತಾಯಿತು. 

ಲೈಂಗಿಕ ಕಿರುಕುಳ ಆರೋಪದಲ್ಲಿ ಲಾಕ್ ಅಪ್ ನಲ್ಲಿ ಇರಿಸಲಾಗಿದ್ದ ವ್ಯಕ್ತಿಗೆ ಸೋಂಕು ತಗುಲಿದ್ದು, ಸಂತ್ರಸ್ತೆ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ. ಠಾಣೆಯ 20 ಅಧಿಕಾರಿಗಳು ಕೂಡಾ ಕ್ವಾರಂಟೈನ್ ನಲ್ಲಿದ್ದಾರೆ  ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಈ ಮಧ್ಯೆ, ಮೆಯೋ ಹಾಲ್ ಮತ್ತು ಇಡೀ ಆವರಣವನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಲಾಗಿದೆ. 10ನೇ ಹೆಚ್ಚುವರಿ ಮುಖ್ಯ ನಗರ ಮ್ಯಾಜಿಸ್ಟ್ರೇಟ್ ಮುಂದೆ ಜೂನ್ 1ರಂದು ಹಾಜರುಪಡಿಸಲಾಗಿದ್ದ ಆರೋಪಿಗೂ ಕೋವಿಡ್-19 ಸೋಂಕು ತಗುಲಿದೆ. 

ದೈಹಿಕ ವಿಚಾರಣೆ ಸೇರಿದಂತೆ ನ್ಯಾಯಾಲಯ ಶುಲ್ಕ, ಪ್ರಕ್ರಿಯೆ ಶುಲ್ಕ ಇತ್ಯಾದಿಗಳನ್ನು ಭೌತಿಕವಾಗಿ ಸಲ್ಲಿಸಲು ಬಾರ್ ಸದಸ್ಯರಿಗೆ ನೀಡಲಾದ ಎಲ್ಲಾ ಅಪಾಯಿಂಟ್ ಮೆಂಟ್  ರದ್ದುಪಡಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಶುಕ್ರವಾರ ನೋಟಿಸ್ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT