ಗಾರ್ಮೆಂಟ್ ಕಾರ್ಮಿಕರ ಪ್ರತಿಭಟನೆ 
ರಾಜ್ಯ

ಶ್ರೀರಂಗಪಟ್ಟಣ: 1200 ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ ಗಾರ್ಮೆಂಟ್ ಕಂಪನಿ

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಗಾರ್ಮೆಂಟ್ ಉದ್ಯಮದ ಮೇಲೆ ತೀವ್ರ ರೀತಿಯ ಹೊಡೆತ ಬಿದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಗಾರ್ಮೆಂಟ್ ಕಂಪನಿಯೊಂದು ತನ್ನ 1200 ಕಾರ್ಮಿಕರನ್ನು ಕೆಲಸದಿಂದಲೇ ತೆಗೆದುಹಾಕಿದೆ.

ಮಂಡ್ಯ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಗಾರ್ಮೆಂಟ್ ಉದ್ಯಮದ ಮೇಲೆ ತೀವ್ರ ರೀತಿಯ ಹೊಡೆತ ಬಿದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಗಾರ್ಮೆಂಟ್ ಕಂಪನಿಯೊಂದು ತನ್ನ 1200 ಕಾರ್ಮಿಕರನ್ನು ಕೆಲಸದಿಂದಲೇ ತೆಗೆದುಹಾಕಿದೆ.

ಆಡಳಿತ ಮಂಡಳಿ ಈ ನಿರ್ಧಾರವನ್ನು ಖಂಡಿಸಿ ನೂರಾರು ಕಾರ್ಮಿಕರು ಟಿಬಿ ರಸ್ತೆಯಲ್ಲಿರುವ ಗೋಕಲದಾಸ್ ಎಕ್ಸ್ ಪೋರ್ಟ್ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಮಹಿಳೆ ಪೂರ್ಣಿಮಾ, ಮಾರ್ಚ್ 23ರಿಂದ ಈವರೆಗೂ ಕೇವಲ ಅರ್ಧ ದಿನದ ವೇತನ ನೀಡಲಾಗುತ್ತಿದೆ. ನಾಳೆ ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ಸಭೆ ಇದೆ ಎಂದು ತಿಳಿಸಿದರು.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಬೇಕಾಯಿತು ಎಂದು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸ್ವರೂಪ್ ಹೇಳಿದರು.

ಇದು ಕೈಗಾರಿಕಾ ವಿವಾದ ಕಾಯ್ದೆ ಸೆಕ್ಷನ್ (25) ಎಂನ್ನು ಉಲ್ಲಂಘಿಸಿದೆ. ಕಾರ್ಮಿಕರಿಗೆ ಅರ್ಧ ವೇತನ ನೀಡಿದರೆ ಕಾರ್ಖಾನೆ ನಡೆಯುತ್ತಿಲ್ಲ ಎಂಬರ್ಥವಾಗುತ್ತದೆ. ಇದು ಕಾರ್ಖಾನೆ ಮುಚ್ಚಲು ಕಾರಣವಾಗಬಹುದು ಎಂದು ಗಾರ್ಮೆಂಟ್ ಅಸೋಸಿಯೇಷನ್ ಟ್ರೇಡ್ ವರ್ಕರ್ಸ್ ಯೂನಿಯನ್ ಅಧ್ಯಕ್ಷೆ ಆರ್. ಪ್ರತಿಭಾ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT