ಶಾಲೆಯೊಂದರಲ್ಲಿ ಸಿಬ್ಬಂದಿಯನ್ನು ಥರ್ಮಲ್ ತಪಾಸಣೆ ನಡೆಸುತ್ತಿರುವುದು 
ರಾಜ್ಯ

ಶಿಫ್ಟ್ ಮಾದರಿಯಲ್ಲಿ, ಆನ್ ಲೈನ್ ತರಗತಿಗಳ ಮೂಲಕ ಶಾಲೆ ಮರು ಆರಂಭವಾಗಬೇಕು:ಡಿಆರ್ ಡಿಒ ಮಾಜಿ ಮಹಾ ನಿರ್ದೇಶಕ

ಕೊರೋನಾ ವೈರಸ್ ಸಮಯದಲ್ಲಿ ಶಾಲೆಗಳನ್ನು ತೆರೆಯುವುದಾದರೆ ಶಿಫ್ಟ್ ಮಾದರಿಯಲ್ಲಿ ಮತ್ತು ಪ್ರಾಜೆಕ್ಟ್ ಆಧಾರಿತ ಅಧ್ಯಯನವನ್ನು ಆದ್ಯತೆಯಾಗಿಟ್ಟುಕೊಂಡು ಆನ್ ಲೈನ್ ತರಗತಿಗಳನ್ನು ಆರಂಭಿಸುವಂತೆ ಖ್ಯಾತ ವಿಜ್ಞಾನಿ ಸಲಹೆ ನೀಡಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಸಮಯದಲ್ಲಿ ಶಾಲೆಗಳನ್ನು ತೆರೆಯುವುದಾದರೆ ಶಿಫ್ಟ್ ಮಾದರಿಯಲ್ಲಿ ಮತ್ತು ಪ್ರಾಜೆಕ್ಟ್ ಆಧಾರಿತ ಅಧ್ಯಯನವನ್ನು ಆದ್ಯತೆಯಾಗಿಟ್ಟುಕೊಂಡು ಆನ್ ಲೈನ್ ತರಗತಿಗಳನ್ನು ಆರಂಭಿಸುವಂತೆ ಖ್ಯಾತ ವಿಜ್ಞಾನಿ ಸಲಹೆ ನೀಡಿದ್ದಾರೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ)ದ ಮಾಜಿ ಮಹಾ ನಿರ್ದೇಶಕ ವಿ ಕೆ ಸಾರಸ್ವತ, ಕೋವಿಡ್-19 ಸಮಯದಲ್ಲಿ ಆನ್ ಲೈನ್ ತರಗತಿಗಳಿಗೆ ಅವರು ಹೆಚ್ಚು ಒಲವು ತೋರಿಸಿದ್ದಾರೆ.ಆದರೆ ಈ ಆನ್ ಲೈನ್ ತರಗತಿಗಳನ್ನು ಹೆಚ್ಚು ಸಂಘಟಿತವಾಗಿ, ಸಂವಾದಾತ್ಮಕ ರೀತಿಯಲ್ಲಿ ನಡೆಸಿ ಮಕ್ಕಳಿಗೆ ಹೆಚ್ಚು ಜ್ಞಾನ ಪೂರೈಕೆಯಾಗುವಂತೆ ಮಾಡಬೇಕು ಎಂದಿದ್ದಾರೆ.

ಮಕ್ಕಳ ಆರೋಗ್ಯವನ್ನು ಮುಖ್ಯವಾಗಿ ಗಮನದಲ್ಲಿಟ್ಟುಕೊಂಡು ಶಾಲೆಗಳನ್ನು ಮರು ಆರಂಭಿಸಬೇಕು ಎಂದು ನೀತಿ ಆಯೋಗದ ಸದಸ್ಯರೊಬ್ಬರು ಸಹ ಹೇಳಿದ್ದಾರೆ.ಶಿಫ್ಟ್ ಮಾದರಿಯಲ್ಲಿ ಶಾಲೆಗಳನ್ನು ನಡೆಸಿದರೆ ಮಕ್ಕಳ ಸಂಖ್ಯೆ ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬಹುದು, ಇದಕ್ಕೆ ಶಿಕ್ಷಕ-ಶಿಕ್ಷಕಿಯರ ಸಂಖ್ಯೆ ಕೂಡ ಹೆಚ್ಚಾಗಿ ಬೇಕಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಒಂದು ತರಗತಿಯ ಅರ್ಧದಷ್ಟು ಮಕ್ಕಳು ಅಥವಾ ಒಂದರಿಂದ 6ನೇ ತರಗತಿಯವರೆಗಿನ ಮಕ್ಕಳು ಬೆಳಗ್ಗೆ ಉಳಿದ ತರಗತಿಯ ಮಕ್ಕಳು ಸಾಯಂಕಾಲ ಬಂದರೆ ಮಕ್ಕಳ ದಟ್ಟಣೆ ಕಡಿಮೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬಹುದು ಎಂದು ಸಾರಸ್ವತ್ ಅಭಿಪ್ರಾಯಪಟ್ಟಿದ್ದಾರೆ.

ಆನ್ ಲೈನ್ ತರಗತಿ ನಡೆಸುವಾಗ ಮಕ್ಕಳು ಹೆಚ್ಚು ಕ್ರಿಯಾಶೀಲವಾಗಿ, ಸೃಜನಾತ್ಮಕವಾಗಿ ಪಾಲ್ಗೊಳ್ಳಲು ಪ್ರಾಜೆಕ್ಟ್ ಆಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು ಎಂಬುದು ಅವರ ಅನಿಸಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT