ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಚಿಕಿತ್ಸೆಗಾಗಿ ಜಿಲ್ಲಾಡಳಿತ ಹಣ ಪಡೆಯುತ್ತಿದೆ-ಸುಳ್ಳು ಸುದ್ದಿ ವೈರಲ್ ಮಾಡಿದ್ದ ಯುವಕ ಅರೆಸ್ಟ್

ಕೊರೋನಾವೈರ್ಸ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಲಕ್ಷಗಟ್ಟಲೆ ಹಣ ಪಡೆಯುತ್ತಿದೆ ಎಂದು ಸುಳ್ಳು ಸುದ್ದಿಯನ್ನು ವೈರಲ್ ಮಾಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ.

ಕುಂದಾಪುರ: ಕೊರೋನಾವೈರ್ಸ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಲಕ್ಷಗಟ್ಟಲೆ ಹಣ ಪಡೆಯುತ್ತಿದೆ ಎಂದು ಸುಳ್ಳು ಸುದ್ದಿಯನ್ನು ವೈರಲ್ ಮಾಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ.

ಕೊರೋನಾವೈರಸ್ ಚಿಕಿತ್ಸೆಗಾಗಿ ಜಿಲ್ಲಾಡಳಿತ ಸೋಂಕಿತರಿಂದ 3.50 ಲಕ್ಷ ಹಣ ಪಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ತಾಣಗಳಲ್ಲಿ ಸಂದೇಶ ಹಾಕಿದ್ದ ಕಮಲಶಿಲೆ ನಿವಾಸಿ ಸುರೇಶ್ ಕುಲಾಲ್ (22)  ನನ್ನು ಶಂಕರನಾರಾಯಣ ಪೋಲೀಸರು ಬಂಧಿಸಿದ್ದಾರೆ.

“ಕೊರೋನಾವೈರಸ್ ಚಿಕಿತ್ಸೆಗೆ 3.50 ಲಕ್ಷ ಹಣ ಪಡೆಯಲಾಗುತ್ತಿದ್ದು ಜಿಲ್ಲಾಡಳಿತ ಯಾವ ರೀತಿಯಲ್ಲಿಯೂ ಪ್ರತಿಕ್ರಯಿಸುತ್ತಿಲ್ಲ”  ಎಂಬ ವಾಟ್ಸಪ್ ಸಂದೇಶವನ್ನು ಈತ ವೈರಲ್ ಮಾಡಿದ್ದಾನೆ. ಈ ಸಂಬಂಧ ವಂಡ್ಸೆ ಗ್ರಾಮ ಕಂದಾಯ ನಿರೀಕ್ಷಕ ರಾಘವೇಂದ್ರ ಶಂಕರನಾರಾಯಣ ಠಾಣೆಗೆ ದೂರು ಸಲ್ಲಿಸಿದ್ದರು

ಸಧ್ಯ  ಆಪಾದಿತನ ವಿರುದ್ದ ಐಟಿ ಕಾಯಿದೆ, ಡಿಎಂ ಕಾಯಿದೆ ಹಾಗೂ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT