ಸುರೇಶ್ ಕುಮಾರ್ 
ರಾಜ್ಯ

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೋಂದಣಿ: ಸುರೇಶ್ ಕುಮಾರ್

ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ತಾತ್ಕಾಲಿಕ ಸ್ಥಗಿತವಾಗಿದ್ದ ನಾಗರೀಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಜನಸೇವಕ ಯೋಜನೆಯನ್ನು ಪುನರಾರಂಭಗೊಳಿಸುವ ನಿಟ್ಟಿನಲ್ಲಿ ವಿಧಾನಸೌಧದದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಹಾಗೂ ಬೆಂಗಳೂರಿನ ಸಂಬಂಧಿಸಿದ ವಿಧಾನಸಭಾ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಈ ಯೋಜನೆಯನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದರು.

ಪ್ರಸ್ತುತ ಜನಸೇವಕ ಯೋಜನೆ ಬೆಂಗಳೂರು ಮಹಾನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಿಯಲ್ಲಿದ್ದು, ಆದಾಯ, ಜಾತಿ ಪ್ರಮಾಣ ಪತ್ರ, ಹಿರಿಯ ನಾಗರೀಕರ ಪಿಂಚಣಿ ಸೇವೆ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇವೆಗಳು ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ತೀರಾ ಅಗತ್ಯವಾಗಿರುವ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT