ಸುರೇಶ್ ಕುಮಾರ್ 
ರಾಜ್ಯ

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೋಂದಣಿ: ಸುರೇಶ್ ಕುಮಾರ್

ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ತಾತ್ಕಾಲಿಕ ಸ್ಥಗಿತವಾಗಿದ್ದ ನಾಗರೀಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಜನಸೇವಕ ಯೋಜನೆಯನ್ನು ಪುನರಾರಂಭಗೊಳಿಸುವ ನಿಟ್ಟಿನಲ್ಲಿ ವಿಧಾನಸೌಧದದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಹಾಗೂ ಬೆಂಗಳೂರಿನ ಸಂಬಂಧಿಸಿದ ವಿಧಾನಸಭಾ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಈ ಯೋಜನೆಯನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದರು.

ಪ್ರಸ್ತುತ ಜನಸೇವಕ ಯೋಜನೆ ಬೆಂಗಳೂರು ಮಹಾನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಿಯಲ್ಲಿದ್ದು, ಆದಾಯ, ಜಾತಿ ಪ್ರಮಾಣ ಪತ್ರ, ಹಿರಿಯ ನಾಗರೀಕರ ಪಿಂಚಣಿ ಸೇವೆ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇವೆಗಳು ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ತೀರಾ ಅಗತ್ಯವಾಗಿರುವ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT