ಸುರೇಶ್ ಕುಮಾರ್ 
ರಾಜ್ಯ

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೋಂದಣಿ: ಸುರೇಶ್ ಕುಮಾರ್

ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ತಾತ್ಕಾಲಿಕ ಸ್ಥಗಿತವಾಗಿದ್ದ ನಾಗರೀಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಜನಸೇವಕ ಯೋಜನೆಯನ್ನು ಪುನರಾರಂಭಗೊಳಿಸುವ ನಿಟ್ಟಿನಲ್ಲಿ ವಿಧಾನಸೌಧದದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಹಾಗೂ ಬೆಂಗಳೂರಿನ ಸಂಬಂಧಿಸಿದ ವಿಧಾನಸಭಾ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಈ ಯೋಜನೆಯನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದರು.

ಪ್ರಸ್ತುತ ಜನಸೇವಕ ಯೋಜನೆ ಬೆಂಗಳೂರು ಮಹಾನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಿಯಲ್ಲಿದ್ದು, ಆದಾಯ, ಜಾತಿ ಪ್ರಮಾಣ ಪತ್ರ, ಹಿರಿಯ ನಾಗರೀಕರ ಪಿಂಚಣಿ ಸೇವೆ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇವೆಗಳು ಸೇರಿದಂತೆ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ನು ಮುಂದೆ ಈ ವ್ಯಾಪ್ತಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ತೀರಾ ಅಗತ್ಯವಾಗಿರುವ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!