ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ಶಿವಮೊಗ್ಗದಲ್ಲಿ 10,000 ಜನರ ಸ್ಯಾಂಪಲ್ಸ್ ಪರೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10,000 ಜನರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.  

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10,000 ಜನರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.  

ಹೊರ ಭಾಗಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಪ್ರಯೋಗಾಲಯಗಳನ್ನೂ ಹೆಚ್ಚಳ ಮಾಡಲಾಗಿದ್ದು, ಈ ವರೆಗೂ 65 ಮಂದಿಯಲ್ಲಿ ವೈವರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ. 

ಮೇ.10ರಂದು ಜಿಲ್ಲೆಯಲ್ಲಿ ಮೊದಲ ವೈರಸ್ ಪತ್ತೆಯಾಗಿತ್ತು. ಗುಜರಾತ್ ರಾಜ್ಯದ ಅಹಮದಾಬಾದ್ ನಿಂದ ಜಿಲ್ಲೆಗೆ ಬಂದಿದ್ದ 8 ಮಂದಿಯಲ್ಲಿ ವೈರಸ್ ಪತ್ತೆಯಾಗಿತ್ತು. ಇದರೊಂದಿಗೆ ಸೋಂಕುತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಮತ್ತು ದೇಶದ ಇದರೆ ಭಾಗಗಳಿಂಗ ಬರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. 

ಜಿಲ್ಲಾ ಸರ್ಜನ್ ಡಾ.ರಘುನಂದನ್ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪರೀಕ್ಷೆಗಳನ್ನೂ ಹೆಚ್ಚಾಗಿ ನಡೆಸಲಾಗುತ್ತಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಬಹುತೇಕ ಮಂದಿಯನ್ನೂ ಪರೀಕ್ಷೆಗೊಳಪಡಿಸಲಾಗುತ್ತಿದೆ. ಸಾರಿ ಹಾಗೂ ಐಎಲ್ಐ ಲಕ್ಷಣಗಳಿರುವವರನ್ನು ಜನರನ್ನು ಪತ್ತೆ ಹಚ್ಚಲು ಸುಲಭವಾಗುತ್ತಿದೆ. ಕ್ಯಾಸನೂರ್ ಫಾರೆಸ್ಟ್ ಡಿಸೀಸ್ ಡಯಾಗ್ನೋಸ್ಟಿಕ್ ಆ್ಯಂಡ್ ರಿಸರ್ಚ್ ಲ್ಯಾಬೋರೇಟರಿ ಸಹಾಯ ಮಾಡುತ್ತಿದ್ದು, ಪ್ರಯೋಗಾಲಯದಲ್ಲಿ ಈ ವರೆಗೂ 700 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT