ಸಂಗ್ರಹ ಚಿತ್ರ 
ರಾಜ್ಯ

17 ಬೆಳೆಗಳ ಬೆಂಬಲ ಬೆಲೆ ಏರಿಸಿ: ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ...

ಬೆಂಗಳೂರು: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದ್ದಾರೆ. 

ಈ ಕುರಿತು ಪ್ರಧಾನಿಗೆ ಬರೆದ ಪತ್ರದಲ್ಲಿ 2022-23ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ನೀವು ಕೃಷಿ ಚಟುವಟಿಕೆ ಹಾಗೂ ರೈತರಿಗೆ ಬೆಂಬಲ ಬೆಲೆ ನಿಗದಿ ಮಾಡುವ ಕುರಿತು ತೆಗೆದುಕೊಳ್ಳುವ ತೀರ್ಮಾನಗಳು ಅದಕ್ಕೆ ಪೂರಕವಾಗಿಲ್ಲ. ಬದಲಿಕೆ ರೈತರನ್ನು ಮತ್ತಷ್ಟು ಕಷ್ಟಗಳಿಗೆ ತಳ್ಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 2018-19ನೇ ಬಜೆಟ್ ನಲ್ಲಿ ರೈತರಿಗೆ ಬೆಳೆ ಬೆಳೆಯಲು ತಗುಲುವ ವೆಚ್ಚ 1.5 ರಷ್ಟು ಪಟ್ಟು ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದಿರಿ. 

ಕಷಿ ವೆಚ್ಚ ಮತ್ತು ಬೆಲೆ ಆಯೋಗ (ಸಿಎಪಿಸಿ) ಇದಕ್ಕೆ ತಕ್ಕನಾದ ಮಾನದಂಡ ಅನುಸರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ವೇಲೆ ಸಿ-2 ಮಾನದಂಡದ ಪ್ರಕಾರ ಕೇವಲ ಕೃಷಿ ವೆಚ್ಚ ಮಾತ್ರವಲ್ಲದೆ ಹೊಲದಲ್ಲಿ ದುಡಿಯುವ ಕುಟುಂಬ ಸದಸ್ಯರ ಕೂಲಿ, ನೆಲದ ಬಾಡಿಗೆ, ಬಂಡವಾಳದ ಮೇಲಿನ ಬಡ್ಡಿ ಸೇರಿ ಪ್ರತಿಯೊಂದನ್ನೂ ಗಣನೆಗೆ ತೆಗೆದುಕೊಂಡು ಉತ್ಪಾದನಾ ವೆಚ್ಚ ಅಂದಾಜಿಸಬೇಕು. ಇದರಂತೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT