ಸಂಗ್ರಹ ಚಿತ್ರ 
ರಾಜ್ಯ

17 ಬೆಳೆಗಳ ಬೆಂಬಲ ಬೆಲೆ ಏರಿಸಿ: ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ...

ಬೆಂಗಳೂರು: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದ್ದಾರೆ. 

ಈ ಕುರಿತು ಪ್ರಧಾನಿಗೆ ಬರೆದ ಪತ್ರದಲ್ಲಿ 2022-23ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ನೀವು ಕೃಷಿ ಚಟುವಟಿಕೆ ಹಾಗೂ ರೈತರಿಗೆ ಬೆಂಬಲ ಬೆಲೆ ನಿಗದಿ ಮಾಡುವ ಕುರಿತು ತೆಗೆದುಕೊಳ್ಳುವ ತೀರ್ಮಾನಗಳು ಅದಕ್ಕೆ ಪೂರಕವಾಗಿಲ್ಲ. ಬದಲಿಕೆ ರೈತರನ್ನು ಮತ್ತಷ್ಟು ಕಷ್ಟಗಳಿಗೆ ತಳ್ಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 2018-19ನೇ ಬಜೆಟ್ ನಲ್ಲಿ ರೈತರಿಗೆ ಬೆಳೆ ಬೆಳೆಯಲು ತಗುಲುವ ವೆಚ್ಚ 1.5 ರಷ್ಟು ಪಟ್ಟು ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದಿರಿ. 

ಕಷಿ ವೆಚ್ಚ ಮತ್ತು ಬೆಲೆ ಆಯೋಗ (ಸಿಎಪಿಸಿ) ಇದಕ್ಕೆ ತಕ್ಕನಾದ ಮಾನದಂಡ ಅನುಸರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ವೇಲೆ ಸಿ-2 ಮಾನದಂಡದ ಪ್ರಕಾರ ಕೇವಲ ಕೃಷಿ ವೆಚ್ಚ ಮಾತ್ರವಲ್ಲದೆ ಹೊಲದಲ್ಲಿ ದುಡಿಯುವ ಕುಟುಂಬ ಸದಸ್ಯರ ಕೂಲಿ, ನೆಲದ ಬಾಡಿಗೆ, ಬಂಡವಾಳದ ಮೇಲಿನ ಬಡ್ಡಿ ಸೇರಿ ಪ್ರತಿಯೊಂದನ್ನೂ ಗಣನೆಗೆ ತೆಗೆದುಕೊಂಡು ಉತ್ಪಾದನಾ ವೆಚ್ಚ ಅಂದಾಜಿಸಬೇಕು. ಇದರಂತೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT