ಮೃತಪಟ್ಟಿರುವ ಹಸಿವಿನ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 

ಹಲಸಿನ ಹಣ್ಣಿಗೆ ವಿಷ ಬೆರಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ ಕಿಡಿಗೇಡಿಗಳು ಹಲಸಿನ ಹಣ್ಣಿಗೆ ವಿಷ ಬೆರಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದ ಸಾವನ್ನಪ್ಪಿದ ಮೂರು ಹಸುಗಳು ಕಿಟ್ಟೆಗೌಡ ಹಾಗೂ ಮಧು ಎಂಬುವವರಿಗೆ ಸೇರಿವೆ.

ಘಟನೆಗೆ ಸಂಬಂಧಿಸಿದಂತೆ‌ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT