ಮೃತಪಟ್ಟಿರುವ ಹಸಿವಿನ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 

ಹಲಸಿನ ಹಣ್ಣಿಗೆ ವಿಷ ಬೆರಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ ಕಿಡಿಗೇಡಿಗಳು ಹಲಸಿನ ಹಣ್ಣಿಗೆ ವಿಷ ಬೆರಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದ ಸಾವನ್ನಪ್ಪಿದ ಮೂರು ಹಸುಗಳು ಕಿಟ್ಟೆಗೌಡ ಹಾಗೂ ಮಧು ಎಂಬುವವರಿಗೆ ಸೇರಿವೆ.

ಘಟನೆಗೆ ಸಂಬಂಧಿಸಿದಂತೆ‌ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?