ವಿಧಾನಸೌಧ 
ರಾಜ್ಯ

ನೇಕಾರ ಸಮ್ಮಾನ್ ಯೋಜನೆ ಜಾರಿ: ನೇಕಾರರಿಂದ ಅರ್ಜಿ ಆಹ್ವಾನ

ಕೋವಿಡ್-19 ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಜಾರಿಗೊಳಿಸಲಾಗಿರುವ ನೇಕಾರ ಸಮ್ಮಾನ್ ಯೋಜನೆ ನೆರವನ್ನು ಪಡೆದುಕೊಳ್ಳಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಕೋವಿಡ್-19 ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಜಾರಿಗೊಳಿಸಲಾಗಿರುವ ನೇಕಾರ ಸಮ್ಮಾನ್ ಯೋಜನೆ ನೆರವನ್ನು ಪಡೆದುಕೊಳ್ಳಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರ 2020-21 ನೇ ಸಾಲಿನಿಂದ ಕೈಮಗ್ಗ ನೇಕಾರಿಕೆ ಹಾಗೂ ಇತರೆ ಕೈಮಗ್ಗ ಚಟುಚಟಿಕೆ ನಡೆಸುವ ನೇಕಾರರಿಗೆ ತಲಾ 2 ಸಾವಿರ ರೂ ನೆರವು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ೨೦೧೭-೧೮ನೇ ಸಾಲಿನಲ್ಲಿ ೪ನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ನೋಂದಾಯಿಸಲಾದ ಕೈಮಗ್ಗ ನೇಕಾರರಿಗೆ ಪೆಹಚಾನ್ ಕಾರ್ಡ್ ನಂಬರ್ ನೀಡಲಾಗಿದ್ದು, ಈ ಕಾರ್ಡ್ ಹೊಂದಿರುವ ಅಥವಾ ಗಣತಿಯ ಪಟ್ಟಿಯಲ್ಲಿ ನೋಂದಾಯಿಸಲಾಗಿರುವ ಕೈಮಗ್ಗ ನೇಕಾರರಿಗೆ ತಲಾ 2 ಸಾವಿರ ರೂ. ನಂತೆ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಕೈಮಗ್ಗ ನೇಯ್ಗೆಯಲ್ಲಿ ತೊಡಗಿರುವ ನೇಕಾರರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು, ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಸರ್ಕಾರಿ ಎಸ್.ಜೆ.ಪಿ.ಪಾಲಿಟೆಕ್ನಿಕ್ ಆವರಣ, ಕೆ.ಆರ್.ಸರ್ಕಲ್, ಬೆಂಗಳೂರು-೫೬೦೦೦೧ ರವರಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜೂನ್ ೧೭ರೊಳಗೆ ಅರ್ಜಿ ಸಲ್ಲಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT