ಸಾಂದರ್ಭಿಕ ಚಿತ್ರ 
ರಾಜ್ಯ

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಆಟೋ, ಟ್ಯಾಕ್ಸಿ ಚಾಲಕರಿಗೆ ಐಟಿ ವೃತ್ತಿಪರರಿಂದ ಸಹಾಯ!

ಕೋವಿಡ್-19ನಿಂದ ಸಂಕಷ್ಟಕ್ಕೊಳಗಾದ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕಳೆದ ತಿಂಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದಾಗ ಈ ವರ್ಗದವರಿಗೆ ನಿರಾಳ ಭಾವನೆ ಬಂತು.

ಬೆಂಗಳೂರು: ಕೋವಿಡ್-19ನಿಂದ ಸಂಕಷ್ಟಕ್ಕೊಳಗಾದ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕಳೆದ ತಿಂಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದಾಗ ಈ ವರ್ಗದವರಿಗೆ ನಿರಾಳ ಭಾವನೆ ಬಂತು.

ಈ ಸರ್ಕಾರದ ಸೌಲಭ್ಯಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಎಂದು ಹಲವರಿಗೆ ಗೊತ್ತಿರಲಿಲ್ಲ. ಇದು ಸಾಫ್ಟ್ ವೇರ್ ಎಂಜಿನಿಯರ್ ಕೌಶರ್ ರಬ್ಬಾನಿ ಮತ್ತು ಅವರ ಇತರ ಐಟಿ ವೃತ್ತಿಪರರು ಒಟ್ಟು ಸೇರಿ 10 ಕಾರ್ಯಕರ್ತರು ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸಹಾಯ ಮಾಡುತ್ತಿದ್ದಾರೆ. ಸೇವಾ ಸಿಂಧು ಪೋರ್ಟಲ್ ನಲ್ಲಿ  ಅರ್ಜಿ ತುಂಬಿಸಲು 10 ಚಾಲಕರಿಗೆ ಸಹಾಯ ಮಾಡಿದ್ದಾರೆ.

ಅರ್ಜಿ ತುಂಬಿ ಕೊಡಬೇಕಾದರೆ 1500 ರೂಪಾಯಿ ಕೊಡಬೇಕು ಎಂದು ಬ್ರೋಕರ್ ಗಳು ಕೇಳಿದ್ದರಂತೆ, ಫಲಾನುಭವಿಗಳು ಆಧಾರ್ ಕಾರ್ಡು. ಚಾಲನಾ ಪರವಾನಗಿ ಪತ್ರ, ವಾಹನದ ವಿವರ, ದಾಖಲಾತಿ ಸಂಖ್ಯೆ ಇತ್ಯಾದಿಗಳನ್ನು ಕೊಡಬೇಕು.ಎಲ್ಲಿಂದ ಪೋರ್ಟಲ್ ನಲ್ಲಿ ಅರ್ಜಿ ಹಾಕಿದ್ದು ಎಂಬ ವಿವರ ಕೂಡ ಕೊಡಬೇಕಾಗಿತ್ತು ಎನ್ನುತ್ತಾರೆ ಕಾರ್ಯಕರ್ತ ಶಾಜಿನ್ ಸಿದ್ದಿಖಿ.

ಡಿಜಿಟಲ್ ಪ್ರಕ್ರಿಯೆಗಳನ್ನು ಸುಲಭವಾಗಿ ಸರಳವಾಗಿ ಫಲಾನುಭವಿಗಳಿಗೆ ಹೇಳಿಕೊಟ್ಟಿದ್ದೇವೆ. ಒಬ್ಬ ಚಾಲಕನು ವಿವರಗಳನ್ನು ಕೇಳಲು ಅಂಚೆ ಕಚೇರಿಗೆ ಹೋದಾಗ ಪೋರ್ಟಲ್ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಕೆಲವು ತಾಂತ್ರಿಕ ಪದಗಳ ಬಗ್ಗೆ ಗೊಂದಲಕ್ಕೊಳಗಾದಾಗ ನಮಗೆ ಕರೆಗಳು ಬಂದವು. ಒಬ್ಬರು ವಾಹನಕ್ಕೆ ಆರೋಗ್ಯ ಪ್ರಮಾಣಪತ್ರ ಏನೆಂದು ಕೇಳಿದರು. ಮಾಲಿನ್ಯ ಪ್ರಮಾಣಪತ್ರದ ಅರ್ಥ ಹೇಗೆ ಎಂದು ನಾವು ವಿವರಿಸಿದೆವು ಎಂದು ರಬ್ಬಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT