ಬಿಬಿಎಂಪಿ ಕಚೇರಿ 
ರಾಜ್ಯ

ಗುತ್ತಿಗೆ ಅವಧಿ ಮುಗಿದಿರುವ ಎಲ್ಲಾ ಆಸ್ತಿ ವಶಕ್ಕೆ ತೆಗೆದುಕೊಳ್ಳಲು ಬಿಬಿಎಂಪಿ ನಿರ್ಧಾರ

ಭೋಗ್ಯಕ್ಕೆ (ಲೀಸ್) ನೀಡಿರುವ ಪಾಲಿಕೆಯ ಎಲ್ಲಾ ಕಟ್ಟಡಗಳ ದಾಖಲಾತಿಗಳನ್ನು ಪುನರ್ ಪರಿಶೀಲಿಸಲು ಬಿಬಿಎಂಪಿ ನಿರ್ಧರಿಸಿದೆ.ನಗರದಲ್ಲಿ ಗುತ್ತಿಗೆ ಅವಧಿ ಮುಗಿದಿರುವ ಹಾಗೂ ಇನ್ನೂ ಚಾಲ್ತಿಯಲ್ಲಿರುವ ಒಟ್ಟು 324 ಆಸ್ತಿಗಳಿಗೆ ಸದ್ಯದ ಮಾರುಕಟ್ಟೆ ದರ ನಿಗದಿ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್‌ ಎಂ.ಗೌತಮ್‌ಕುಮಾರ್‌ ತಿಳಿಸಿದ್ದಾರೆ

ಬೆಂಗಳೂರು: ಭೋಗ್ಯಕ್ಕೆ (ಲೀಸ್) ನೀಡಿರುವ ಪಾಲಿಕೆಯ ಎಲ್ಲಾ ಕಟ್ಟಡಗಳ ದಾಖಲಾತಿಗಳನ್ನು ಪುನರ್ ಪರಿಶೀಲಿಸಲು ಬಿಬಿಎಂಪಿ ನಿರ್ಧರಿಸಿದೆ.ನಗರದಲ್ಲಿ ಗುತ್ತಿಗೆ ಅವಧಿ ಮುಗಿದಿರುವ ಹಾಗೂ ಇನ್ನೂ ಚಾಲ್ತಿಯಲ್ಲಿರುವ ಒಟ್ಟು 324 ಆಸ್ತಿಗಳಿಗೆ ಸದ್ಯದ ಮಾರುಕಟ್ಟೆ ದರ ನಿಗದಿ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್‌ ಎಂ.ಗೌತಮ್‌ಕುಮಾರ್‌ ತಿಳಿಸಿದ್ದಾರೆ

ಪಾಲಿಕೆಯ ಆಸ್ತಿ ಸಂರಕ್ಷಣೆ, ತೆರಿಗೆ ಸಂಗ್ರಹ ಹಾಗೂ ಗುತ್ತಿಗೆ ದರ ನಿಗದಿ ಮಾಡುವ ಸಂಬಂಧ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮೇಯರ್‌ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಬಿಎಂಪಿಯಿಂದ ವಿವಿಧ ಸಂಘ-ಸಂಸ್ಥೆಗಳು  ಹಾಗೂ ಸೇವಾ ಸಂಸ್ಥೆಗಳಿಗೆ ಕಡಿಮೆ ದರಕ್ಕೆ ಗುತ್ತಿಗೆ ನೀಡಲಾಗಿದೆ.

ಈ ರೀತಿ ಒಟ್ಟು 324 ವಿವಿಧ ಸಂಘ ಸಂಸ್ಥೆಗಳು ಹಾಗೂ ಸಮಾಜ ಸೇವಾ ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಇವುಗಳಲ್ಲಿ 159  ಆಸ್ತಿಗಳ ಗುತ್ತಿಗೆ ಅವಧಿ ಮುಕ್ತಾಯವಾಗಿದ್ದು, 165 ಆಸ್ತಿಗಳ ಗುತ್ತಿಗೆ ಅವಧಿ ಇನ್ನೂ ಬಾಕಿ ಇದೆ. ಎಲ್ಲವನ್ನೂ ಸದ್ಯದ ಮಾರುಕಟ್ಟೆ ದರಕ್ಕೆ ನಿಗದಿ ಮಾಡಲುತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಆಸ್ತಿಗಳ ವಿಭಾಗಕ್ಕೆ  ವಿಶೇಷ ತಂಡ: ಪಾಲಿಕೆಯ ಆಸ್ತಿ ಸಂರಕ್ಷಿಸುವ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಲು ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದ ಮೇಯರ್‌, ತಹಶೀಲ್ದಾರ್‌ಗಳು, ಸಹಾಯಕ ಕಂದಾಯ ಅಧಿಕಾರಿಗಳು, ಎಂಜಿನಿಯರ್‌ ಗಳು ಹಾಗೂ ಸರ್ವೇಯರ್‌ಗಳ ವಿಶೇಷ ತಂಡ ರಚಿಸಿ ಆಸ್ತಿಗಳ ವಿಭಾಗ ಬಲಪಡಿಸಲು ಸೂಚಿಸಲಾಗಿದೆ.

ಪಾಲಿಕೆ ಒಡೆತನದ ಆಸ್ತಿಗಳನ್ನು ನಿಗದಿತ ಸಮಯದಲ್ಲಿ ಹಿಂಪಡೆಯಲು ಕ್ರಮವಹಿಸಬೇಕು. ಭೋಗ್ಯದ ಅವಧಿ ಮುಗಿದ ಕಟ್ಟಡಗಳಿದ್ದರೆ ಇಂದಿನ ಮಾರುಕಟ್ಟೆ ದರದ ಪ್ರಕಾರ ಶುಲ್ಕ ನಿಗದಿಪಡಿಸಿ, ಗುತ್ತಿಗೆಯನ್ನು ನವೀಕರಿಸಬಹುದು’ ಹೇಳಿದರು. ಸರ್ಕಾರದಿಂದ ಹಸ್ತಾಂತರವಾದ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಪಾಲಿಕೆಗೆ ಹಸ್ತಾಂತರಿಸಿರುವ ಬಡಾವಣೆಗಳಲ್ಲಿರುವ ಆಸ್ತಿಗಳ ಪ್ರತ್ಯೇಕ ಪಟ್ಟಿ ತಯಾರಿಸಬೇಕು. ಇಂತಹ ಬಹಳಷ್ಟು ಆಸ್ತಿಗಳಿಗೆ ಗುರುತು ಸಂಖ್ಯೆ (ಪಿಐಡಿ) ನೀಡಿಲ್ಲ. ಆದಷ್ಟು ಬೇಗ ಪಿಐಡಿ ನೀಡಿ ಅವುಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮೇಯರ್‌ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT