ಅಮೂಲ್ಯ ಲಿಯೋನಾ 
ರಾಜ್ಯ

ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನ್‍ಗೆ ಷರತ್ತು ಬದ್ಧ ಜಾಮೀನು ಮಂಜೂರು

ಕೇಂದ್ರ ಸರ್ಕಾರದ ಸಿಎಎ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನಾಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಕೇಂದ್ರ ಸರ್ಕಾರದ ಸಿಎಎ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನಾಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಮೂಲ್ಯ ಲಿಯೋನ್‍ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಮೂಲ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಇಂದು ರಾತ್ರಿ ಜಾಮೀನು ಮಂಜೂರು ಮಾಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರರಾದ ಅಮೂಲ್ಯ ಇನ್ನೂ 19 ವರ್ಷ ವಯಸ್ಸಿನ ಯುವತಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಓದುತ್ತಿದ್ದಾರೆ. ಅವರು ಪಾಕಿಸ್ತಾನ ಜಿಂದಾಬಾದ್ ಎಂದಷ್ಟೇ ಕೂಗಿದ್ದಾರೆ. ಪಾಕಿಸ್ತಾನವನ್ನು ನಮ್ಮ ದೇಶ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಮತ್ತು ಘೋಷಣೆ ಮಾಡಿಲ್ಲ. ಹೀಗಾಗಿ, ಜಾಮೀನು ನೀಡಬೇಕೆಂದು ಮನವಿ ಮಾಡಿದರು. 

ಈ ಹಿಂದೆ 19 ವರ್ಷದ ಅಮೂಲ್ಯ ಲಿಯೋನ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 60ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ನ ನ್ಯಾಯಮೂರ್ತಿ ವಿದ್ಯಾಧರ್‌ ಶಿರಹಟ್ಟಿ ತಿರಸ್ಕರಿಸಿದ್ದರು. ಪ್ರಕರಣದ ಬಗ್ಗೆ ತನಿಖೆ ಪೂರ್ಣಗೊಳ್ಳದಿರುವುದು ಹಾಗೂ ಪೊಲೀಸ್‌ ಅಧಿಕಾರಿಗಳು ಇದುವರೆಗೂ ಚಾರ್ಜ್‌ಶೀಟ್‌ ಸಲ್ಲಿಸಿಲ್ಲವಾದ್ದರಿಂದ ಜಾಮೀನು ಅರ್ಜಿ ವಜಾಗೊಳಿಸಲಾಗಿತ್ತು. ಇದೀಗ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಏನಿದು ಪ್ರಕರಣ?
ಫೆ.20ರಂದು ಕೆಲ ಸಂಘಟನೆಗಳು ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಮೂಲ್ಯ ಲಿಯೋನ್ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದರು. ನಂತರ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಮೂಲ್ಯ ವಿರುದ್ಧ ಐಪಿಸಿ ಸೆಕ್ಷನ್ 124(ಎ), 153(ಎ)(ಬಿ), 505(2) ಅಡಿ ದೇಶದ್ರೋಹ, ಸಾಮಾಜಿಕ ಶಾಂತಿ ಕದಡಿದ ಆರೋಪದಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅಂದಿನಿಂದ ಈವರೆಗೂ ಕಾರಾಗೃಹದಲ್ಲಿರುವ ಅಮೂಲ್ಯ ಜಾಮೀನಿಗಾಗಿ ನಿರಂತರ ಪ್ರಯತ್ನ ನಡೆಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT