ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 85 ರಿಂದ 113ಕ್ಕೇರಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಇತ್ತ ಬಿಬಿಎಂಪಿ ತನ್ನ ವ್ಯಾಪ್ತಿಯ ಕಂಟೈನ್ ಮೆಂಟ್ ಝೋನ್ ಸಂಖ್ಯೆಗಳನ್ನು 85ರಿಂದ 113ಕ್ಕೆ ಏರಿಕೆ ಮಾಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಇತ್ತ ಬಿಬಿಎಂಪಿ ತನ್ನ ವ್ಯಾಪ್ತಿಯ ಕಂಟೈನ್ ಮೆಂಟ್ ಝೋನ್ ಸಂಖ್ಯೆಗಳನ್ನು 85ರಿಂದ 113ಕ್ಕೆ ಏರಿಕೆ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಂಟೈನ್‌ಮೆಂಟ್‌ ಪ್ರದೇಶಗಳ ಸಂಖ್ಯೆ 113ಕ್ಕೆ ಏರಿಕೆಯಾಗಿದೆ. ಗುರುವಾರ ಒಂದೇ ದಿನ 28 ಹೊಸ ಕಂಟೈನ್‌ಮೆಂಟ್‌ ಪ್ರದೇಶಗಳನ್ನು ಗುರುತಿಸಲಾಗಿದೆ. ಬುಧವಾರ ಈ ಸಂಖ್ಯೆ 85 ಇತ್ತು. ಇದುವರೆಗೆ ಪಾಲಿಕೆಯ 198 ವಾರ್ಡ್‌ಗಳಲ್ಲಿ 109 ವಾರ್ಡ್‌ಗಳಲ್ಲಿ ಕೋವಿಡ್‌ 19 ಸೋಂಕು ಪತ್ತೆಯಾಗಿದೆ.

ಕಾವಲ್‌ ಭೈರಸಂದ್ರ, ಕೋಣನಕುಂಟೆ, ಹೂಡಿ, ಬೆಳ್ಳಂದೂರು, ವಸಂತಪುರ, ಅರಕೆರೆ, ಬಾಗಲಕುಂಟೆ, ದೇವಸಂದ್ರ, ವಿ.ವಿ.ಪುರ, ಗಂಗಾನಗರ, ಸಂಪಂಗಿರಾಮನಗರ, ಕುಶಾಲನಗರ, ಚಾಮರಾಜಪೇಟೆ, ರಾಯಪುರ, ಧರ್ಮರಾಯ ಸ್ವಾಮಿನಗರ, ಚಿಕ್ಕಪೇಟೆ, ಕಮ್ಮನಹಳ್ಳಿ, ಹನುಮಂತನಗರ, ವಸಂತನಗರ ವಾರ್ಡ್‌ಗಳಲ್ಲಿ ತಲಾ ಒಂದು ಹಾಗೂ ಗರುಡಾಚಾರ್‌ಪಾಳ್ಯ, ಸಿಂಗಸಂದ್ರ, ಹಾಗೂ ಎಸ್‌.ಕೆ.ಗಾರ್ಡನ್‌ ವಾರ್ಡ್‌ಗಳಲ್ಲಿ ತಲಾ ಎರಡು ಕಂಟೈನ್‌ಮೆಂಟ್‌ ಪ್ರದೇಶಗಳನ್ನು ಹೊಸತಾಗಿ ಗುರುತಿಸಲಾಗಿದೆ. 

ನಗರದಲ್ಲಿ 24 ಗಂಟೆಗಳಲ್ಲಿ 17 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಇದರಿಂದಾಗಿ ಕೋವಿಡ್ ಪೀಡಿತರ ಸಂಖ್ಯೆ 581ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾದರೂ ನಗರದಲ್ಲಿ ಮಾತ್ರ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೂರು ದಿನಗಳಲ್ಲಿ 89 ಮಂದಿ ಸೋಂಕಿತರಾಗಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಸೋಂಕು ತಗುಲಿರುವುದು ಹೇಗೆ ಎಂಬುದು ಪತ್ತೆಯೇ ಆಗಿಲ್ಲ. ಅಂತೆಯೇ ನಗರದಲ್ಲಿ ಮತ್ತೆ ಇಬ್ಬರು ಕೊರೊನಾ ಸೋಂಕಿನಿಂದಲೇ ಮೃತ ಪಟ್ಟಿರುವುದು ಬುಧವಾರ ದೃಢಪಟ್ಟಿದೆ. ಇದರಿಂದ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT