ಸಾಂದರ್ಭಿಕ ಚಿತ್ರ 
ರಾಜ್ಯ

ವಿವಿಧ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕೆಪಿಎಸ್​​ಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಕೋವಿಡ್-19 ಸೋಂಕಿನ ಭೀತಿಯಿಂದಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 18-03-2020 ಮತ್ತು 24-04-2020ರ ಪತ್ರಿಕಾ ಪ್ರಕಟಣೆಗಳಲ್ಲಿ ಮುಂದೂಡಲಾಗಿತ್ತು. ಪ್ರಸ್ತುತ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ಮರುನಿಗದಿಪಡಿಸಿದೆ. ದಿನಾಂಕ 02-08-2020ರಂದು ಕೆಎಎಸ್ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. 

ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 24ಹುದ್ದೆಗಳಿಗೆ ದಿನಾಂಕ 07-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1- ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2.30 ರಿಂದ 4.30ರ ವರೆಗೆ ಪತ್ರಿಕೆ 2). 

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಣಕರು 54 ಹುದ್ದೆಗಳಿಗೆ ದಿನಾಂಕ 19-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1 - ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2 ರಿಂದ 4 ವರೆಗೆ ಪತ್ರಿಕೆ 2- ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣೆ ವಿಷಯದ ಪರೀಕ್ಷೆ ನಡೆಯಲಿದೆ).  ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳಿಗೆ ದಿನಾಂಕ 02-08-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ 12 ರವರೆಗೆ ಪತ್ರಿಕೆ 1, ಹಾಗೂ ಮಧ್ಯಾಹ್ನ 2 ರಿಂದ 4 ರ ವರೆಗೆ ಪತ್ರಿಕೆ 2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್​​ಸಿ ಪ್ರಕಟಣ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT