ಸಾಂದರ್ಭಿಕ ಚಿತ್ರ 
ರಾಜ್ಯ

ರಹಸ್ಯ ಬೇಧಿಸಿದ ಪೊಲಿಸರು: 20 ಸಜೀವ ಗುಂಡುಗಳು ಕಪಿಲಾ ನದಿಯಲ್ಲಿ ಪತ್ತೆ!

ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡು ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ನಾಪತ್ತೆಯಾಗಿದ್ದ ಬುಲೆಟ್‌ಗಳು ಕಪಿಲಾ ನದಿಯಲ್ಲಿ ಪತ್ತೆಯಾಗಿವೆ.

ಮೈಸೂರು: ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡು ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ನಾಪತ್ತೆಯಾಗಿದ್ದ ಬುಲೆಟ್‌ಗಳು ಕಪಿಲಾ ನದಿಯಲ್ಲಿ ಪತ್ತೆಯಾಗಿವೆ.

ಬುಲೆಟ್ ಕದ್ದಿದ್ದ ಕಳ್ಳ ಠಾಣೆಯಲ್ಲೆ ಸಿಕ್ಕಿಬಿದ್ದಿದ್ದಾನೆ. ಹಿಂದಿನ ರೈಟರ್ ಕೃಷ್ಣೇಗೌಡ ಎಂಬವರೇ ಬುಲೆಟ್‌ಗಳನ್ನು ಕದ್ದಆರೋಪಿಯಾಗಿದ್ದು, ತಾನು ಕದ್ದ ಬುಲೆಟ್‌ಗಳನ್ನ ನಂಜನಗೂಡು ಕಪಿಲಾ ನದಿಯಲ್ಲಿ ಎಸೆದಿದ್ದಾಗಿ ವಿಚಾರಣೆ ವೇಳೆ ಆತ ಸತ್ಯ ಬಾಯ್ಬಿಟ್ಟಿದ್ದಾನೆ.

ಕಳೆದ ವಾರವಷ್ಟೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಬುಲೆಟ್‌ಗಳು ಠಾಣಾ ದಾಸ್ತಾನು ಕೊಠಡಿಯಿಂದ ನಾಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರನ್ನ ಅಮಾನತು ಸಹ ಮಾಡಲಾಗಿತ್ತು. ಅಂದು  ಕೃಷ್ಣೇಗೌಡ ಮೇಲೆ ಶಂಕೆ ಇತ್ತು.ಹೀಗಾಗಿ ಇಂದು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ್ಮಹತ್ಯೆ ನಾಟಕವಾಡಿದ್ದ ಕೃಷ್ಣೇಗೌಡ ನಂತರ ಒಂದೊಂದೆ ಸತ್ಯ ಬಾಯ್ಬಿಟ್ಟಿದ್ದಾನೆ.

ಬುಲೆಟ್ಸ್ ನಾಪತ್ತೆ ಪ್ರಕರಣವನ್ನು ಮರೆಮಾಚಲು ಆರೋಪಿ ಕೃಷ್ಣೇಗೌಡ ಆತ್ಮಹತ್ಯೆ ಡ್ರಾಮಾ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸಜೀವ ಗುಂಡುಗಳು ನಾಪತ್ತೆಯಾದ ಪ್ರಕರಣ ಸಂಬಂಧ ಕೃಷ್ಣೇಗೌಡನನ್ನು ಅಮಾನತು ಮಾಡಲಾಗಿತ್ತು. ಇದರಿಂದ  ವಿಚಲಿತನಾದ ಆದ ಆತ್ಮಹತ್ಯೆಯ ಹೈ ಡ್ರಾಮಾ ಮಾಡಿದ್ದ.

ನುರಿತ ಈಜುಗಾರರ  ನೆರವಿನಿಂದ ಕಪಿಲಾ ನದಿಯಲ್ಲಿ ಬುಲೆಟ್‌ಗಳಿಗಾಗಿ ಶೋಧ ಮಾಡಿದಾಗ 20 ಬುಲೆಟ್‌ಗಳು ಕಪಿಲಾ ಸೇತುವೆ ಬಳಿ ಪತ್ತೆಯಾಗಿದ್ದು, ಉಳಿದ ಬುಲೆಟ್‌ಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು ಎಎಸ್ಪಿ ಸ್ನೇಹಾ ನೇತೃತ್ವದಲ್ಲಿ ತನಿಖೆ ಮುಂದುವರೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT