ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ 
ರಾಜ್ಯ

ಬಿಎಂಟಿಸಿ ಚಾಲಕನಿಗೆ ಕೊರೋನಾ ಸೋಂಕು ಪತ್ತೆ: ಪ್ರಯಾಣಿಕರಲ್ಲಿ ಆತಂಕ! 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಚಾಲಕರೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಚಾಲಕರೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕೆ. ಆರ್. ಪುರಂನ ಡಿಪೋ ಸಂಖ್ಯೆ 24ರ, 500 ಬಿ ಮಾರ್ಗದಲ್ಲಿ ಇತ್ತೀಚಿಗೆ  ಕರ್ತವ್ಯಕ್ಕೆ ಹಾಜರಾಗಿದ್ದ ಚಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸಹೋದ್ಯೋಗಿಗಳಲ್ಲಿ ಭೀತಿಯುಂಟಾಗಿದೆ.

ಕಲಬುರಗಿ ಜಿಲ್ಲೆ ಅಪ್ಜಲ್ ಪುರದ ನಿವಾಸಿಯಾಗಿರುವ ಚಾಲಕ  ಜೂನ್ 6 ರಂದು ಕೋವಿಡ್ -19 ನಿಗದಿತ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತವಾಗಿ ಪರೀಕ್ಷೆ ಮಾಡಿಸಿದಾಗ ಸೋಂಕು  ತಗುಲಿರುವುದು ಖಚಿತವಾಗಿದೆ. ನಂತರ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಈ ಬಗ್ಗೆ ಸ್ಪಷ್ಟಪಡಿಸಿರುವ ಬಿಎಂಟಿಸಿ, ದೈನಂದಿನ ಕರ್ತವ್ಯಕ್ಕೆ ವರದಿ ಮಾಡುವಾಗ ಅವರಿಗೆ ಜ್ವರ ಅಥವಾ ಆರೋಗ್ಯ ಸಮಸ್ಯೆಯ  ಯಾವುದೇ ಲಕ್ಷಣಗಳು ಇರಲಿಲ್ಲ. ಆರೋಗ್ಯ ಸಂಪರ್ಕ ಅಧಿಕಾರಿಗಳಿಂದ ಸಂಪರ್ಕ ಪತ್ತೆ ಹಚ್ಚುವಿಕೆಯನ್ನು ಪ್ರಾರಂಭಿಸಲಾಗಿದೆ. ಅವರು ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಪ್ರಯಾಣದ ಇತಿಹಾಸ ಹೊಂದಿದ್ದಾರೆ.ನಿಗದಿತ ಮಾನದಂಡಗಳ ಮೂಲಕ ಕೆಲಸದ ಸ್ಥಳವನ್ನು ಸೋಂಕು ರಹಿತ ದ್ರಾವಣ ಬಳಸಿ ಸ್ವಚ್ಛಗೊಳಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆಯಂತೆ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದೆ.

ಬಿಎಂಟಿಸಿ ತನ್ನ ನೌಕರರು ಮತ್ತು ಸಾರ್ವಜನಿಕ  ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT