ಆದಿತ್ಯ ರಾವ್ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ: ಪೋಲೀಸರಿಂದ 700 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಮಂಗಳೂರು: ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಗೃಹ ಇಲಾಖೆಯ ಕಾರ್ಯದರ್ಶಿಯಿಂದ ಅಗತ್ಯ ಅನುಮತಿ ಪಡೆದ ನಂತರ 700 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಾರ್ಜ್‌ಶೀಟ್‌ನ ಪ್ರಕಾರ, ಎಸಿಪಿ ಬೆಳ್ಳಿಯಪ್ಪ ನೇತೃತ್ವದ ಪೊಲೀಸ್ ತನಿಖಾ ತಂಡವು ಜನರು ಮತ್ತು ಅಧಿಕಾರಿಗಳಲ್ಲಿ ಭಯ ಹುಟ್ಟಿಸುವ ಸಲುವಾಗಿ ಆರೋಪಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಸ್ಫೋಟಕವನ್ನು ಅಳವಡಿಸಿರುವುದು  ಪತ್ತೆಯಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಪ್ರವೇಶದ್ವಾರದಲ್ಲಿ ಅಳವಡಿಸಲಾಗಿದ್ದ  ಬಾಂಬ್ ಶೀಘ್ರದಲ್ಲೇ ಪತ್ತೆಯಾಗಿದ್ದು ವಿಮಾನ ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿ ಅದನ್ನು ನಾಶಪಡಿಸಲಾಗಿದೆ.

ಆರೋಪಿ ಪ್ರಸ್ತುತ ಜೈಲಿನಲ್ಲಿದ್ದು, ಸಾಂಕ್ರಾಮಿಕ ರೋಗ ಕೊರೋನಾ ಕಾರಣದಿಂದಾಗಿ ಆತನ ಬ್ರೈನ್ ಮ್ಯಾಪಿಂಗ್  ಪರೀಕ್ಷೆ ಬಾಕಿ ಇದೆ. ಘಟನೆ ನಡೆದ ಎರಡು ದಿನಗಳ ನಂತರ ರಾವ್ ಬೆಂಗಳೂರಿನ ಐಜಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ. ಘಟನೆಯ ವಿಚಾರಣೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡವು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ರಾವ್ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವಾಗ ಬಾಂಬ್ ಯೋಜನೆ ಸಿದ್ದಪಡಿಸಿದ್ದ ಎನ್ನುವುದನ್ನು ಕಂಡುಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT