ಜೆಸಿ ಮಾಧುಸ್ವಾಮಿ 
ರಾಜ್ಯ

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ: ಮಾಧುಸ್ವಾಮಿ

ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾ ಇರುವುದರಿಂದ ಸಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಪಂಚಾಯಿತಿಗಳ ಅವಧಿ ಪೂರ್ಣಗೊಂಡಿರುವುದರಿಂದ ಆಡಳಿತಾಧಿಕಾರಿ ನೇಮಿಸಲು ಸರಕಾರ ನಿರ್ಧರಿಸಿದೆ. ಜತೆಗೆ ಮುಂದಿನ 2ರಿಂದ 3 ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 6 ತಿಂಗಳ ಒಳಗೆ ಚುನಾವಣೆ
ನಡೆಸಲಾಗುತ್ತದೆ ಎಂದು ಸಂಪುಟ ಸಭೆಯ ವಿವರ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಗ್ರಾಮ ಚಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ, ಸರ್ಕಾರ ಈ ವರೆಗೆ ಚುನಾವಣೆ ನಡೆಸಲು ಮುಂದಾಗಿಲ್ಲ. ಹೀಗಾಗಿ ವಿರೋಧ ಪಕ್ಷಗಳು ಕಳೆದ ಹಲವು ದಿನಗಳಿಂದ ಚುನಾವಣೆಗೆ ಆಗ್ರಹಿಸುತ್ತಿದ್ದಾರೆ. 

"ರಾಜ್ಯದಲ್ಲಿ ಅವಧಿ ಮೀರಿರುವ ಎಲ್ಲಾ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನೂ ಶೀಘ್ರದಲ್ಲಿ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಹೀಗಾಗಿ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಆದರೆ, ಚುನಾವಣೆ ನಡೆಯುವವರೆಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಪ್ರತಿಯೊಂದು ಪಂಚಾಯತಿಗಳಿಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಈ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ, ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT