ಉತ್ತಯ್ಯ 
ರಾಜ್ಯ

ಕೊರೋನಾ ಟ್ರ್ಯಾಜೆಡಿ: ಖಿನ್ನತೆಯಿಂದ ಕೊಡಗಿನ ನಿವೃತ್ತ ಯೋಧ ಆತ್ಮಹತ್ಯೆ

ಕೊರೋನಾ ಲಾಕ್ಡೌನ್ ನಿಮಿತ್ತ ಮೂರು ತಿಂಗಳಿನಿಂಡ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಖಿನ್ನತೆಗೊಳಗಾದ ಪರಿಣಾಮ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಮಡಿಕೇರಿ ತಾಲ್ಲೂಕಿನ ಚೋಣಕೆರೆ ಗ್ರಾಮದಲ್ಲಿ ನಡೆದಿದೆ.

ಮಡಿಕೇರಿ: ಕೊರೋನಾ ಲಾಕ್ಡೌನ್ ನಿಮಿತ್ತ ಮೂರು ತಿಂಗಳಿನಿಂಡ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಖಿನ್ನತೆಗೊಳಗಾದ ಪರಿಣಾಮ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಮಡಿಕೇರಿ ತಾಲ್ಲೂಕಿನ ಚೋಣಕೆರೆ ಗ್ರಾಮದಲ್ಲಿ ನಡೆದಿದೆ.

ಯೋಧ ಉತ್ತಯ್ಯ (74)  ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು ತಮ್ಮ ಮನೆಯಲ್ಲಿನ ಕೋಣೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುಂಡು ಹಾರಿಸಿಕೊಂಡ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಪರಿಣಾಮ ಉತ್ತಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. 

ಘಟನೆ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT