ರಾಜ್ಯ

ಕೊರೋನಾವೈರಸ್ ಲಾಕ್‌ಡೌನ್ ಬಳಿಕ ಮತ್ತೆ ಅಲರ್ಟ್ ಆದ ಎಸಿಬಿ: ಕೆಐಎಡಿಬಿ ಅಧಿಕಾರಿಯ ಮನೆ ಮೇಲೆ ದಾಳಿ

 ಕೊರೋನಾವೈರಸ್  ಲಾಕ್‌ಡೌನ್ ಅವಧಿ ಮುಗಿದ ನಂತರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಜೂನ್ 12ರ ಗುರುವಾರ ಮಂಗಳೂರು, ಮಂಡ್ಯ ಮತ್ತು ಬೆಂಗಳೂರು ಸೇರಿದಂತೆ ಏಕಕಾಲದಲ್ಲಿ ರಾಜ್ಯದ ಹಲವಾರು ತಾಣಗಳ ಮೇಲೆ ಎಸಿಬಿದಾಳಿ ನಡೆಸಿತು.  ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ದಾಸೇಗೌಡ ಈ ಎಲ್ಲಾ ನಗರಗಳಲ್ಲಿ ಮನೆ, ಆಸ್ತಿ ಹೊಂದಿದ್ದಾರೆಂದು ವರ

ಮಂಗಳೂರು: ಕೊರೋನಾವೈರಸ್  ಲಾಕ್‌ಡೌನ್ ಅವಧಿ ಮುಗಿದ ನಂತರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಜೂನ್ 12ರ ಗುರುವಾರ ಮಂಗಳೂರು, ಮಂಡ್ಯ ಮತ್ತು ಬೆಂಗಳೂರು ಸೇರಿದಂತೆ ಏಕಕಾಲದಲ್ಲಿ ರಾಜ್ಯದ ಹಲವಾರು ತಾಣಗಳ ಮೇಲೆ ಎಸಿಬಿದಾಳಿ ನಡೆಸಿತು.  ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ದಾಸೇಗೌಡ ಈ ಎಲ್ಲಾ ನಗರಗಳಲ್ಲಿ ಮನೆ, ಆಸ್ತಿ ಹೊಂದಿದ್ದಾರೆಂದು ವರದಿಯಾಗಿದ್ದು ದಾಸೇಗೌಡ . ಡಿಸೆಂಬರ್ 19ರಂದು ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ  ಎಸಿಬಿಯಿಂದ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ದಾಳಿಯ ಸಮಯದಲ್ಲಿ, ತಂಡವು ಅಪಾರ ಪ್ರಮಾಣದ ದಾಖಲೆಗಳಿಲ್ಲದ ಆಸ್ತಿಗಳನ್ನು ಪತ್ತೆ ಮಾಡಿದೆ ಎನ್ನಲಾಗಿದ್ದು ಮಂಗಳೂರಿನ  ಫ್ಲ್ಯಾಟ್ ಸೇರಿದಂತೆ ಮೂರರಿಂದ ನಾಲ್ಕು ಮನೆಗಳನ್ನು ಅಧಿಕಾರಿ ಹೊಂದಿದ್ದಾರೆ ಎಂದು ವರದಿಯಾಗಿದೆ. . ಅವರು ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ 11 ಸೈಟ್ ಗಳನ್ನು ಹೊಂದಿದ್ದಾರೆ. ಇದಲ್ಲದೆ  ಚಿನ್ನದ ಆಭರಣಗಳ ಬೃಹತ್ ಸಂಗ್ರಹವೂ ಕಂಡುಬಂದಿದೆ.

ಅಧಿಕಾರಿಯ ಮೇಲೆ ಅಕ್ರಮವಾಗಿ ಆಸ್ತಿ ಸಂಗ್ರಹಿಸಿದ ಆರೋಪ ಹೊರಿಸಲಾಗಿದ್ದು ವರು ಲಂಚ ಸ್ವೀಕಾರ ಪ್ರಕರಣದಲ್ಲಿ ಅಮಾನತಿನಲ್ಲಿದ್ದಾರೆ. ಅವರನ್ನು ಬಂಧಿಸಿದ ನಂತರ ದಾಸೇಗೌಡ ಜಾಮೀನಿನ ಮೇಲೆ ಹೊರಬಂದಿದ್ದರು.

ಮಂಗಳೂರಿನ  ಎಸಿಬಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಮತ್ತು ಇನ್ಸ್‌ಪೆಕ್ಟರ್ ಯೋಗೀಶ್ ನಾಯಕ್ ದಾಳಿಯ  ನೇತೃತ್ವ ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT