ಸಂಗ್ರಹ ಚಿತ್ರ 
ರಾಜ್ಯ

ಬನ್ನೇರುಘಟ್ಟ ರಸ್ತೆಯಲ್ಲಿ ದೊಡ್ಡ ಮಟ್ಟದಲ್ಲಿಯೇ ಪಾಲಿಕೆ ಆಸ್ತಿ ಒತ್ತುವರಿ: ಶಾಕ್ ಆದ ಮೇಯರ್ ಗೌತಮ್

ಹೊಂಬೇಗೌಡನಗರ ವಾರ್ಡ್'ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14 ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿರುವ ಜಾಗವನ್ನು ವಶಕ್ಕೆ ಪಡೆದು ನಾಮಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು ನಿರ್ದೇಶಿಸಿದ್ದಾರೆ. 

ಬೆಂಗಳೂರು: ಹೊಂಬೇಗೌಡನಗರ ವಾರ್ಡ್'ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14 ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿರುವ ಜಾಗವನ್ನು ವಶಕ್ಕೆ ಪಡೆದು ನಾಮಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು ನಿರ್ದೇಶಿಸಿದ್ದಾರೆ. 

ಗುರುವಾರ ಒತ್ತುವರಿಯಾಗಿರುವ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೊಂಬೇಗೌಡ ನಗರ ವಾರ್ಡ್'ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ನಂ.14 ಜಾಗ ಪಾಲಿಕೆಯ ಆಸ್ತಿಗಳಾಗಿವೆ. ಈ ಭಾಗದಲ್ಲಿ ಅನಧಿಕೃತವಾಗಿ ಮಾರ್ಬಲ್ ಅಂಗಡಿಗಳು ಸೇರಿದಂತೆ ವಿವಿಧ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ಭಾಗಗಳಲ್ಲಿ ಅಂದಾಜು 10.4 ಎಕರೆ ಪಾಲಿಕೆಗೆ ಸೇರಬೇಕಾಗಿದೆ. ಕೂಡಲೇ ಸರ್ವೇ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಜೊತೆಗೆ ನಗರದ ಪಾಲಿಕೆಯ ಒಡೆತನದ ಆಸ್ತಿಗಳನ್ನು ಸರ್ವೇ ಮಾಡಿ, ವಶಕ್ಕೆ ಪಡೆಯುವ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ನಾಮಫಲಕ ಅಳವಡಿಸುವಂತೆ ನಿರ್ದೇಶನ ನೀಡಲಾಗಿದೆ. ಸರ್ವೇ ಮಾಡಿ ಅತಿಕ್ರಮಗೊಂಡ ಸರ್ಕಾರಿ ಆಸ್ತಿಯನ್ನು ವಶಕ್ಕೆ ಪಡೆಯಬೇಕು. ಈ ರೀತಿ ಪಾಲಿಕೆಯ ಜಾಗ ಒತ್ತುವರಿ ಮಾಡಿರುವವರಿಗೆ ಬಿಬಿಎಂಪಿ ಅಧಿಕಾರಿಗಳು ಸಹಾಯ ಮಾಡಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ವಿಶೇಷ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಈ ವೇಳೆ ಉಪಮಹಾಪೌರರು ಶ್ರೀ ರಾಮಮೋಹನ ರಾಜು, ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರು ಶ್ರೀ ಮೋಹನ್ ಕುಮಾರ್, ವಿಶೇಷ ಆಯುಕ್ತರು(ಆಸ್ತಿಗಳು) ಶ್ರೀ ಜಿ.ಮಂಜುನಾಥ್ ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT