ಮೈಸೂರು ವಿಶ್ವವಿದ್ಯಾನಿಲಯ 
ರಾಜ್ಯ

ಮೈಸೂರು ವಿವಿಗೆ 27ನೇ ಶ್ರೇಣಿ: ಸಚಿವ ಸೋಮಶೇಖರ್ ಅಭಿನಂದನೆ

ನ್ಯಾಷನಲ್  ಇನ್ಸ್ಟಿಟ್ಯೂಟ್ ಆಫ್ ರ‍್ಯಾಂಕಿಂಗ್ ಫ್ರೇಮ್ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ  ಪಾತ್ರವಾಗಿದ್ದು, 27ನೇ ಶ್ರೇಣಿ (Rank) ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ  ಮೂಲಕ ಮೈಸೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಗರಿ ಮೂಡಿದಂತಾಗಿರುವುದಕ್ಕೆ ಅಭಿನಂದನೆ  ಸಲ್ಲಿಸುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರು: ನ್ಯಾಷನಲ್  ಇನ್ಸ್ಟಿಟ್ಯೂಟ್ ಆಫ್ ರ‍್ಯಾಂಕಿಂಗ್ ಫ್ರೇಮ್ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ  ಪಾತ್ರವಾಗಿದ್ದು, 27ನೇ ಶ್ರೇಣಿ (Rank) ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ  ಮೂಲಕ ಮೈಸೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಗರಿ ಮೂಡಿದಂತಾಗಿರುವುದಕ್ಕೆ ಅಭಿನಂದನೆ  ಸಲ್ಲಿಸುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಈ  ಪ್ರಶಸ್ತಿಯನ್ನು ಕೇಂದ್ರ ಸರ್ಕಾರದ ಎಂಎಚ್ ಆರ್ ಡಿ ಅಡಿಯಲ್ಲಿ ಕೊಡಮಾಡಲಾಗುತ್ತದೆ.  ಭಾರತದಲ್ಲಿರುವ ಎಲ್ಲ ವಿವಿಧ ವಿಶ್ವವಿದ್ಯಾಲಯಗಳ ಸಾಧನೆಗಳನ್ನು  ಮಾನದಂಡಗಳನ್ನು  ಇಟ್ಟುಕೊಂಡು ರ‍್ಯಾಂಕಿಂಗ್  ಕೊಡಲಾಗುತ್ತದೆ. ಈಗ ಹೆಮ್ಮೆಯ ವಿಚಾರವೆಂದರೆ ಪ್ರಸಕ್ತ  ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾಲಯವು 27ನೇ ರಾಂಕ್ ಗೆ ಭಾಜನವಾಗಿರುವುದನ್ನು ಕೇಳಿ  ಸಂತಸವಾಗಿದೆ ಎಂದಿದ್ದಾರೆ. 

ಇನ್ನು ಐಐಟಿ,  ಐಐಎಸ್ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಮಾನದಂಡವನ್ನಾಗಿ ಪರಿಗಣಿಸಿ ಕೊಡಲಾಗುವ  ರ‍್ಯಾಂಕಿಂಗ್ ನಲ್ಲಿ ಮೈಸೂರು ವಿಶ್ವವಿದ್ಯಾಲಯವು 47ನೇ ರಾಂಕ್ ಪಡೆದುಕೊಂಡಿದೆ.  ಅಲ್ಲದೆ, ಈಗ ಲಭಿಸಿರುವ 27ನೇ ರಾಂಕ್ ಸ್ಥಾನವು ಕಳೆದ ವರ್ಷ 54ನೇ ಸ್ಥಾನದಲ್ಲಿತ್ತು.  ಅಂದರೆ ಈ ಪ್ರಮಾಣ ಉತ್ತಮಗತಿಯಲ್ಲಿ ಸಾಗಿದೆ ಎಂಬುದು ಖಾತ್ರಿಯಾದಂತಾಗಿದೆ.

 ಎನ್ಐಆರ್ ಎಫ್  ರ‍್ಯಾಂಕಿಂಗ್ ನಿಂದ ಹಲವು ಉಪಯೋಗಗಳಿವೆ. ಕೆಲವೊಂದು ಪ್ರಾಜೆಕ್ಟ್ ಗಳಿಗೆ ಅರ್ಜಿ ಹಾಕುವ  ಸಂದರ್ಭದಲ್ಲಿ ನೀವು ಎನ್ಐಆರ್ ಎಫ್ ರ‍್ಯಾಂಕ್  ಪಟ್ಟಿಯಲ್ಲಿ 50ರೊಳಗೆ ಇದ್ದರೆ ಮಾತ್ರ  ಅನುಮತಿ ಕೊಡಲಾಗುತ್ತಿರುವುದರಿಂದ ಅಂತಹ ಸೌಲಭ್ಯವನ್ನು ವಿಶ್ವವಿದ್ಯಾಲಯ  ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ವಿಶ್ವವಿದ್ಯಾಲಯವು ಇನ್ನೂ ಹೆಚ್ಚಿನ ಸಾಧನೆಗಳನ್ನು  ಮಾಡಲಿ ಎಂದು ಆಶಿಸುವುದಾಗಿ ಸೋಮಶೇಖರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT