ಬಂಧಿತ ಆರೋಪಿಗಳು 
ರಾಜ್ಯ

ಟಿಕ್‌ಟಾಕ್ ವಿಡಿಯೋ ಮೂಲಕ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ: ಬಂಟ್ವಾಳದಲ್ಲಿ ನಾಲ್ವರು ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ಗ್ರಾಮೀಣ ಠಾಣೆ ಪೊಲೀಸ್ ಸಿಬ್ಬಂದಿ ನಾಲ್ವರನ್ನು ಬಂಧಿಸಿದ್ದಾರೆ.

ಬಂಟ್ವಾಳ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ಗ್ರಾಮೀಣ ಠಾಣೆ ಪೊಲೀಸ್ ಸಿಬ್ಬಂದಿ ನಾಲ್ವರನ್ನು ಬಂಧಿಸಿದ್ದಾರೆ.

ಸಜಿಪನಡು ನಿವಾಸಿಗಳಾದ ಮೊಹಮ್ಮದ್ ಮಸೂದ್ (20), ಮೊಹಮ್ಮದ್ ಅಜೀಮ್ (20), ಅಬ್ದುಲ್ ಲತೀಫ್ (20) ಮತ್ತು ಮೊಹಮ್ಮದ್ ಅರ್ಫಾಜ್ (20) ಬಂಧಿತರು. ಹಿಂದೂ ಸ್ಮಶಾನವೊಂದರಲ್ಲಿ ಶಿವನ ವಿಗ್ರಹದ ಸುತ್ತಲೂ ಬೂಟುಗಳನ್ನು ಧರಿಸಿ ಅಸಭ್ಯವಾಗಿ ನೃತ್ಯ ಮಾಡಿದ್ದ ಇವರು ತಮ್ಮ ಈ ನೃತ್ಯವನ್ನು ಟಿಕ್ ಟಾಕ್ ವಿಡಿಯೋ ಮಾಡಿದ್ದಾರೆ ಎಂದು ವರದಿಯಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಅವರು ಅಕ್ರಮವಾಗಿ ಕಾಂಚಿನಡ್ಕ  ಪಡವ, ಶಜಿಪನಾಡಿನ ಶವಾಗಾರಕ್ಕೆ ಪ್ರವೇಶಿಸಿ, ಬೂಟುಗಳನ್ನು ಧರಿಸಿದಂತೆಯೇ ಶಿವನ ವಿಗ್ರಹದ ಬಳಿ  ಕುಳಿತು ಅದರ ಸುತ್ತಲೂ ನರ್ತಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವಿಗ್ರಹದ ಬಳಿ ಬಿಯರ್ ಬಾಟಲಿಗಳು ಮತ್ತು ಗಾಂಜಾ ಸೇವಗೆ ಸಂಬಂಧಿಸಿ ಪುರಾವೆಗಳು ಸಹ ದೊರಕಿದ್ದು ಅವರು ಆಲ್ಕೋಹಾಲ್ ಮತ್ತು ಗಾಂಜಾ ಸೇವಿಸುವ ವಿಡಿಯೋ ಕೂಡ ವೈರಲ್ ಆಗಿದೆ.

ಆರೋ[ಪಿಗಳು ಹಿಂದೂ ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿದ್ದಾರೆಂದು ರುದ್ರಭೂಮಿಯ ಆಡಳಿತದ ನಿರ್ವಾಹಕರು ಪೊಲೀಸರಿಗೆ ದೂರು ನೀಡಿದ್ದರು.

ಬಂಟ್ವಾಳ ಡಿವೈಎಸ್ಪಿ ವ್ಯಾಲೆಂಟೈನ್ ಡಿಸೋಜಾ  ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ  ಸರ್ಕಲ್ ಇನ್ಸ್‌ಪೆಕ್ಟರ್ ಟಿ ಡಿ ನಾಗರಾಜ್ ಅವರ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಹಾಗೂ ಇತರರಿದ್ದ ತಂಡವು ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT