ಹೋಮದಲ್ಲಿ ಭಾಗಿಯಾದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 
ರಾಜ್ಯ

ಕೆಪಿಸಿಸಿ ನೂತನ ಕಚೇರಿಯಲ್ಲಿಂದು ಹೋಮ-ಹವನ; ಡಿ ಕೆ ಶಿವಕುಮಾರ್ ಭಾಗಿ

ಎಲ್ಲರ ಒಳಿತಿಗಾಗಿ, ಎಲ್ಲಾ ವಿಘ್ನಗಳನ್ನು ತೊಡೆದು ಹಾಕಿ ಕಾರ್ಯಗಳು ಸರಾಗವಾಗಿ ಸಾಗಲಿ ಎಂದು ಪ್ರಾರ್ಥಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ ಹೋಮ-ಹವನ ನೆರವೇರುತ್ತಿದೆ.

ಬೆಂಗಳೂರು: ಎಲ್ಲರ ಒಳಿತಿಗಾಗಿ, ಎಲ್ಲಾ ವಿಘ್ನಗಳನ್ನು ತೊಡೆದು ಹಾಕಿ ಕಾರ್ಯಗಳು ಸರಾಗವಾಗಿ ಸಾಗಲಿ ಎಂದು ಪ್ರಾರ್ಥಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ ಹೋಮ-ಹವನ ನೆರವೇರುತ್ತಿದೆ.

ಜ್ಯೋತಿಷಿ ಡಾ. ನಾಗರಾಜ್ ಆರಾಧ್ಯ ಹಾಗೂ ಅರ್ಚಕ ಮಹಂತೇಶ್ ಭಟ್ ನೇತೃತ್ವದಲ್ಲಿ ಮೂವರು ಅರ್ಚಕರಿಂದ ಗಣಪತಿ ಹೋಮ, ವಾಸ್ತು ಹೋಮ, ರಕ್ಷೋಜ್ಞ ಹೋಮ, ಭೂ ವರಹ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಅಷ್ಟ ಲಕ್ಷ್ಮಿ ಹೋಮ, ಗಾಯಿತ್ರಿ ಹೋಮ ನಡೆಯುತ್ತಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ವಹಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮುಂದೆ ಎಲ್ಲಾ ಕಾರ್ಯಗಳು ಯಾವುದೇ ಅಡೆತಡೆಗಳು ಎದುರಾಗದೆ ನೆರವೇರಬೇಕೆಂದು ಹಾಗೂ ನಾಡಿನ ಒಳಿತಿಗಾಗಿ ಹೋಮ ಮಾಡಲಾಗುತ್ತಿದ್ದು, ಬೆಳಗ್ಗೆ 5 ಗಂಟೆಗೆ ಆರಂಭವಾಗಿರುವ ಹೋಮ ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿಯಾಗಲಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇಂದು ಹೋಮ ಮುಗಿಸಿಕೊಂಡು ಡಿಕೆಶಿ ಮತ್ತು ಅವರ ಕುಟುಂಬಸ್ಥರು ಅರುಣಾಚಲೇಶ್ವರನ ದರ್ಶನ ಪಡೆಯಲಿದ್ದಾರೆ. ಹೀಗಾಗಿ ಇಂದು ಸಂಜೆ 5 ಗಂಟೆಗೆ ತಿರುವಣ್ಣಾಮಲೈಗೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಎಲ್ಲಾ ವಿಘ್ನಗಳು ನಿವಾರಣೆಯಾಗಲಿ ಎಂದು ಶುಭ ಮೂಹೂರ್ತದಲ್ಲಿ ಪೂಜೆ ಆರಂಭಿಸಿದ್ದೇವೆ. ಎರಡು ವರ್ಷಗಳಿಂದ ನೂತನ ಕಟ್ಟಡ ಕಾಮಗಾರಿ ನಿಂತುಹೋಗಿತ್ತು.ಅದು ಈಗ ಸಂಪೂರ್ಣವಾಗಿದೆ. ಈ ರಾಜ್ಯಕ್ಕೆ, ಪಕ್ಷದ ನಾಯಕರು, ಕಾರ್ಯಕರ್ತರಿಗೆ ಒಳ್ಳೆಯದಾಗಲಿ ಎಂದು ಹೋಮ ಮಾಡುತ್ತಿದ್ದೀವಿ. ರಾಜ್ಯ ಆದಷ್ಟು ಬೇಗ ಕೊರೊನಾದಿಂದ ಮುಕ್ತವಾಗಲಿ ಎಂದು ಡಿಕೆಶಿ ಹೇಳಿದರು.

ಅಧ್ಯಕ್ಷರಾಗಿ ಪದಗ್ರಹಣದ ಮಾಡುವ ಬಗ್ಗೆ ಪ್ರತಿಕ್ರಿಯಿಸಿ, ಇಂದು ಸಿದ್ದರಾಮಯ್ಯರನ್ನ ಭೇಟಿಯಾಗಿ ಚರ್ಚೆ ಮಾಡಿ, ದಿನಾಂಕ ನಿಗದಿ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT