ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ಸರ್ಕಾರ ಆದೇಶ ನೀಡದಿದ್ದರೂ, ಆನ್'ಲೈನ್ ತರಗತಿ ಆರಂಭಿಸಿರುವ ಹಲವು ಖಾಸಗಿ ಶಾಲೆಗಳು

5ನೇ ತರಗತಿಯವರೆಗೂ ಆನ್'ಲೈನ್ ತರಗತಿ ನಡೆಸಬಾರದು ಎಂದು ಸರ್ಕಾರವೇ ಆದೇಶ ನೀಡಿದ್ದರೂ, ನಗರದಲ್ಲಿರುವ ಹಲವು ಖಾಸಗಿ ಶಾಲೆಗಳು ಆನ್'ಲೈನ್ ನಲ್ಲಿ ತರಗತಿಗಳು ಆರಂಭಿಸಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. 

ಬೆಂಗಳೂರು: 5ನೇ ತರಗತಿಯವರೆಗೂ ಆನ್'ಲೈನ್ ತರಗತಿ ನಡೆಸಬಾರದು ಎಂದು ಸರ್ಕಾರವೇ ಆದೇಶ ನೀಡಿದ್ದರೂ, ನಗರದಲ್ಲಿರುವ ಹಲವು ಖಾಸಗಿ ಶಾಲೆಗಳು ಆನ್'ಲೈನ್ ನಲ್ಲಿ ತರಗತಿಗಳು ಆರಂಭಿಸಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. 

ಆನ್'ಲೈನ್ ತರಗತಿ ನಡೆಸದಿರುವಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸುವಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಇದನ್ನು ತಮ್ಮ ಲಾಭವಾಗಿ ಬಳಕೆ ಮಾಡಿಕೊಳ್ಳುತ್ತಿರುವ ಖಾಸಗಿ ಶಾಲೆಗಳು, ಸರ್ಕಾರದ ಆದೇಶ ತಮಗೆ ತಲುಪಿಲ್ಲ ಎಂಬ ಕಾರಣ ನೀಡಿ, ಆನ್'ಲೈನ್ ನಲ್ಲಿ ತರಗತಿಗಳನ್ನು ಮುಂದುವರೆಸುತ್ತಿವೆ. 

ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಆದೇಶ ಅಧಿಕೃತವಾಗಿ ತ್ವರಿತಗತಿಯಲ್ಲಿ ಹೊರಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಆನ್'ಲೈನ್ ತರಗತಿ ನಿರ್ಧಾರ ಕೈಗೊಂಡ ದಿನವೇ ಇಲಾಖೆಯು ಆದೇಶ ಬಿಡುಗಡೆ ಮಾಡುವಂತೆ ಹಾಗೂ ಮುಂದಿನ ಹಂತಗಳಲ್ಲಿ ಆನ್'ಲೈನ್ ತರಗತಿ ಕುರಿತಂತೆ ಸಮಿತಿ ರಚಿಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಆದರೆ, ಆದೇಶ ಹೊರಡಿಸುವಲ್ಲಿ ಅಧಿಕಾರಿಗಳು ತಡ ಮಾಡುತ್ತಿದ್ದಾರೆಂದು ಮೂಲಗಳು ತಿಳಿಸಿವೆ. 

ಆದೇಶ ಬಿಡುಗಡೆಗೆ ತಡ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಹಲವು ಅಧಿಕಾರಿಗಳು ಎರಡನೇ ಶನಿವಾರ, ಭಾನುವಾರ, ರಜಾ ದಿನ ಎಂಬ ಕಾರಣಗಳನ್ನು ನೀಡುತ್ತಿದ್ದಾರೆ. 

ಇನ್ನು ಖಾಸಗಿ ಶಾಲೆಗಳು ಸರ್ಕಾರ ಆದೇಶ ಕೈತಲುಪಿಲ್ಲದ ಕಾರಣ, ಆನ್'ಲೈನ್ ತರಗತಿಗಳನ್ನು ಮುಂದುವರೆಸುತ್ತಿರುವುದಾಗಿ ತಿಳಿಸುತ್ತವೆ. ಖಾಸಗಿ ಶಾಲೆ ಹಾಗೂ ಸರ್ಕಾರದ ಆದೇಶಗಳ ಮಧ್ಯೆ ಪೋಷಕರು ಸಂಕಷ್ಟ ಅನುಭವಿಸುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT