ರಾಜ್ಯ

ಉತ್ತರ ಪ್ರದೇಶದಲ್ಲಿ ಬೆಳ್ತಂಗಡಿ ಮೂಲದ ಯೋಧ ಹೃದಯಾಘಾತದಿಂದ ಸಾವು  

Raghavendra Adiga

ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ಸೈನಿಕನೋರ್ವ ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತ ಸೈನಿಕನನ್ನು ಬರಿಯಾ ನಿವಾಸಿ ಸಂದೇಶ್ ಶೆಟ್ಟಿ (34) ಎಂದು ಗುರುತಿಸಲಾಗಿದೆ.

ರಜೆಯಿಂದ ಹಿಂದಿರುಗಿದ ನಂತರ ಕಳೆದ ಸೋಮವಾರ ಅವರು ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಮಥುರಾದಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿ ಅವರನ್ನು ನಿಯೋಜಿಸಲಾಗಿತ್ತು. ಅವರು ಅಲ್ಲಿಯೇ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಮೃತ ಸಂದೇಶ್ ಶೆಟ್ಟಿ  ಕಳೆದ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

SCROLL FOR NEXT