ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆ ಮೇಲೆ ಬೇಕಾಬಿಟ್ಟಿ ಕಾರು ಚಾಲನೆ; ಸ್ಥಳೀಯರಿಂದ ಯುವಕರಿಗೆ ಧರ್ಮದೇಟು

ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ. 

ಬೆಂಗಳೂರು: ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ. 

ಭಾನುವಾರದಂದು ರಸ್ತೆಗಳು ಖಾಲಿ ಇದ್ದ ಕಾರಣ ತಮ್ಮ ದುಬಾರಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಯುವಕರು ಗೆಳತಿಯರೊಂದಿಗೆ ಜಾಲಿ ರೈಡ್ ಹೊರಟಿದ್ದರು. ಜಾಲಿ ಮೂಡ್ ನಲ್ಲಿದ್ದ ಅವರು ರಸ್ತೆಯಲ್ಲಿದ್ದ ಇತರೆ ವಾಹನ ಸವಾರರು, ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡಿದ್ದರು. ತಕ್ಷಣವೇ ಸಾರ್ವಜನಿಕರು ಯುವಕರನ್ನು ಹಿಡಿದು ಇಬ್ಬರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದ ಪರಿಣಾಮ ಇಬ್ಬರನ್ನು ಕಾರಿನಿಂದ ಹೊರಗೆಳೆದು ಧರ್ಮದೇಟು ನೀಡಿದ್ದಾರೆ.

ಅಲ್ಲದೇ, ನಡೆದ ಘಟನೆಯನ್ನು ಸವಿಸ್ತಾರವಾಗಿ ವಿಡಿಯೋ ಮಾಡಿ ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ ಮೂಲಕ ಪೊಸ್ಟ್ ಮಾಡಿದ್ದರು. ತಕ್ಷಣವೇ ವಿಡಿಯೋ ಗಮನಿಸಿದ ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಅವರು ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಚಾರಿ ಉತ್ತರ ವಿಭಾಗದ ಡಿಸಿಪಿ ಸರಾ ಫಾತಿಮಾ ಅವರಿಗೆ ಸೂಚನೆ ನೀಡಿದ್ದರು. ಸದ್ಯ ವಿಡಿಯೋವನ್ನು ಆಧರಿಸಿ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'