ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆ ಮೇಲೆ ಬೇಕಾಬಿಟ್ಟಿ ಕಾರು ಚಾಲನೆ; ಸ್ಥಳೀಯರಿಂದ ಯುವಕರಿಗೆ ಧರ್ಮದೇಟು

ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ. 

ಬೆಂಗಳೂರು: ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ. 

ಭಾನುವಾರದಂದು ರಸ್ತೆಗಳು ಖಾಲಿ ಇದ್ದ ಕಾರಣ ತಮ್ಮ ದುಬಾರಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಯುವಕರು ಗೆಳತಿಯರೊಂದಿಗೆ ಜಾಲಿ ರೈಡ್ ಹೊರಟಿದ್ದರು. ಜಾಲಿ ಮೂಡ್ ನಲ್ಲಿದ್ದ ಅವರು ರಸ್ತೆಯಲ್ಲಿದ್ದ ಇತರೆ ವಾಹನ ಸವಾರರು, ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡಿದ್ದರು. ತಕ್ಷಣವೇ ಸಾರ್ವಜನಿಕರು ಯುವಕರನ್ನು ಹಿಡಿದು ಇಬ್ಬರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದ ಪರಿಣಾಮ ಇಬ್ಬರನ್ನು ಕಾರಿನಿಂದ ಹೊರಗೆಳೆದು ಧರ್ಮದೇಟು ನೀಡಿದ್ದಾರೆ.

ಅಲ್ಲದೇ, ನಡೆದ ಘಟನೆಯನ್ನು ಸವಿಸ್ತಾರವಾಗಿ ವಿಡಿಯೋ ಮಾಡಿ ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ ಮೂಲಕ ಪೊಸ್ಟ್ ಮಾಡಿದ್ದರು. ತಕ್ಷಣವೇ ವಿಡಿಯೋ ಗಮನಿಸಿದ ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಅವರು ಕೂಡಲೇ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಚಾರಿ ಉತ್ತರ ವಿಭಾಗದ ಡಿಸಿಪಿ ಸರಾ ಫಾತಿಮಾ ಅವರಿಗೆ ಸೂಚನೆ ನೀಡಿದ್ದರು. ಸದ್ಯ ವಿಡಿಯೋವನ್ನು ಆಧರಿಸಿ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಗೆ ಬೆಂಬಲ ಅಥವಾ ಕಾಂಗ್ರೆಸ್ ಜತೆ ಎನ್‌ಸಿಪಿ(ಎಸ್‌ಪಿ) ವಿಲೀನ ಕುರಿತು ಶರದ್ ಪವಾರ್ ಚರ್ಚೆ; ಸುಪ್ರಿಯಾ ಸುಳೆಗೆ ಮಹತ್ವದ ಹುದ್ದೆ?

ಭಾರತ - ಪಾಕಿಸ್ತಾನದ 100ಕ್ಕೂ ಹೆಚ್ಚು ರಾಜಕಾರಣಿಗಳು, ಮಾಜಿ ರಾಜತಾಂತ್ರಿಕರಿಂದ ಮೋದಿ, ಷರೀಫ್‌ಗೆ ಪತ್ರ; ಇಲ್ಲಿದೆ ಕಾರಣ...

'ಸಿಂಧು ಜಲ ಒಪ್ಪಂದ ರದ್ದಾದರೆ ಜಾಗತಿಕ ವ್ಯವಸ್ಥೆಯೇ ಕುಸಿಯಲಿದೆ': 'ದಯಮಾಡಿ ನೆರವು ನೀಡಿ' ಜಗತ್ತಿಗೆ ಪಾಕಿಸ್ತಾನ ಮನವಿ

ರೈಲ್ವೆ ಬ್ಯಾರಿಕೇಡ್ ಗೆ ಸಿಲುಕಿ ಒದ್ದಾಡಿದ ಆನೆ; ಅರಣ್ಯ ಇಲಾಖೆ ಹರಸಾಹಸ, ಕೊನೆಗೂ ಉಳಿಯಿತು ಜೀವ! Video

ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ?: ಗೃಹ ಜ್ಯೋತಿ ಮರು ಪರಿಶೀಲನೆಗೆ ಜೆಡಿಎಸ್​​ ಕಿಡಿ