ಸಚಿವ ಕೆ.ಎಸ್. ಈಶ್ವರಪ್ಪ 
ರಾಜ್ಯ

ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ: ಕೆ.ಎಸ್. ಈಶ್ವರಪ್ಪ

ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ  ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಬಳ್ಳಾರಿ: ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ  ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಈ ಮಧ್ಯೆ ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ. ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ಅವರು ಜನಪ್ರತಿನಿಧಿಯಾಗಿದ್ದು, ಅವರ ಸಮಾರಂಭಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕೂಡ ಹಿಂದಿನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ತಾವು ಹೋದಾಗ ಹೆಚ್ಚಿನ ಜನರು ಇರಲಿಲ್ಲ. ಒಂದು  ವೇಳೆ ಕಾನೂನು ಉಲ್ಲಂಘನೆಯಾಗಿದ್ದರೆ ಕಾನೂನು ರೀತ್ಯ ಕ್ರಮ  ಕೈಗೊಳ್ಳಲಾಗುತ್ತದೆ ಎಂದರು.

ವಿಧಾನ ಪರಿಷತ್ ಟಿಕೆಟ್‌ ಪೈಪೋಟಿ ವಿಚಾರಕ್ಕೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಲ್ವರು ಅಭ್ಯರ್ಥಿಗಳ ಹೆಸರುಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಪಕ್ಷಕ್ಕೆ ಬಂದ ವಲಸಿಗರ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತೇವೆ. ಎಲ್ಲರಿಗೂ ನ್ಯಾಯ ಒದಗಿಸುವ ಪ್ರಯತ್ನವನ್ನು ಹೈಕಮಾಂಡ್ ಮಾಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?